ಆರೋಪಿ ಮಗುವನ್ನು ಎತ್ತಿಕೊಂಡು ಕುಂದಾಪುರ ಮಾರ್ಗದ ಬಸ್ ಹತ್ತುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಧೋಳ ತಾಲ್ಲೂಕಿನ ಅರುಣ್ ಹಾಗೂ ಭಾರತಿ ದಂಪತಿಯ ಎರಡೂವರೆ ವರ್ಷದ ಶಿವರಾಜ್ ಅಪಹರಣಕ್ಕೊಳಗಾದ ಮಗು. ದಂಪತಿಗೆ ಪರಿಚಿತನಾಗಿರುವ ಪರಶು ಎಂಬಾತ ಕೃತ್ಯ ಎಸಗಿರುವ ಸಂಶಯವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.