ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗದಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ನವೆಂಬರ್ 7ರಂದು ಸಂಜೆ 5.15ಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ತಲಾ ₹ 10,000 ನಗದು, ಸ್ಮರಣಿಕೆ ಒಳಗೊಂಡಿದೆ ಎಂದು ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್ ತಿಳಿಸಿದ್ದಾರೆ.