<p><strong>ಉಡುಪಿ:</strong> ಪರಸ್ಪರ ಸಂತೋಷವನ್ನು ಹಂಚಿ ಬಾಳುವುದೇ ಕ್ರಿಸ್ಮಸ್ ಹಬ್ಬದ ನಿಜವಾದ ಅರ್ಥವಾಗಿದೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚ್ನ ಧರ್ಮಗುರು ಡೆನಿಸ್ ಡೆಸಾ ಹೇಳಿದರು.</p>.<p>ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಆಶ್ರಯದಲ್ಲಿ ಮಲ್ಪೆ ಸಿಎಸ್ಐ ಚರ್ಚ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ರಿಸ್ಮಸ್ ಹಬ್ಬದ ಸಮಯದಲ್ಲಿ ಪರಸ್ಪರ ಶುಭಾಶಯ, ಸಿಹಿತಿಂಡಿಗಳನ್ನು ಹಂಚಿಕೊಂಡರೆ ಸಾಲದು, ಸಹಬಾಳ್ವೆಯ ಜೀವನವನ್ನು ಬಾಳುವುದರೊಂದಿಗೆ ಅದನ್ನು ಪ್ರತಿಯೊಬ್ಬರು ಜೀವನದಲ್ಲಿ ಅನುಕರಣೆ ಮಾಡಿದಾಗ ಮಾತ್ರ ಹಬ್ಬದ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದರು.</p>.<p>ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಅಧ್ಯಕ್ಷ ರಮೇಶ್ ತಿಂಗಳಾಯ ಮಾತನಾಡಿ, ಎಲ್ಲ ಧರ್ಮಗಳ ಆಚರಣೆಯಲ್ಲಿ ಸಾಮ್ಯತೆಗಳಿವೆ. ನಮ್ಮ ನೆರೆಯವರನ್ನು ಗೌರವಿಸಿ ನಡೆದಾಗ ಸೌಹಾರ್ದ ಸಮಾಜ ನಿರ್ಮಾಣಗೊಳ್ಳುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.</p>.<p>ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಲ್ಪೆ ನೆರ್ಗಿಯ ಕೃಷ್ಣಪ್ಪ ಹಾಗೂ ಯಶೋದಾ ದಂಪತಿ ಪುತ್ರಿ ಶ್ರುತಿ ಅವರಿಗೆ ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ವತಿಯಿಂದ ₹25 ಸಾವಿರ ಧನಸಹಾಯ ಹಸ್ತಾಂತರಿಸಲಾಯಿತು.</p>.<p>ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಿಎಸ್ಐ, ಯುಬಿಎಂ ಚರ್ಚ್ ಮಲ್ಪೆ, ತೊಟ್ಟಂ ಸಂತ ಅನ್ನಮ್ಮ ಚರ್ಚ್ನ ವತಿಯಿಂದ ಕ್ರಿಸ್ಮಸ್ ಸಂಬಂಧಿತ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿದವು.</p>.<p>ವೇದಿಕೆಯಲ್ಲಿ ಯುಬಿಎಂ ಚರ್ಚ್ ಮಲ್ಪೆ ಸಭಾ ಪಾಲಕರಾದ ಪಾಸ್ಟರ್ ಕುಮಾರ್ ಸಾಲಿನ್ಸ್, ಸಮಿತಿಯ ಪದಾಧಿಕಾರಿಗಳಾದ ವನಿತಾ ಫೆರ್ನಾಂಡಿಸ್, ಶಬೀರ್, ಸೀರಾಝ್, ತೊಟ್ಟಂ ಸಂತ ಅನ್ನಮ್ಮ ಚರ್ಚ್ನ ಪಾಲನ ಮಂಡಳಿ ಉಪಾಧ್ಯಕ್ಷ ಸುನೀಲ್ ಫೆರ್ನಾಂಡಿಸ್ ಇದ್ದರು.</p>.<p>ಸಿಎಸ್ಐ ಚರ್ಚ್ ಮಲ್ಪೆ ಸಭಾಪಾಲಕ ಪಾಸ್ಟರ್ ಎಡ್ವಿನ್ ಜೋಸೆಫ್ ಸ್ವಾಗತಿಸಿದರು. ಗಾಡ್ವಿನ್ ವಂದಿಸಿದರು. ಗ್ಲೋರಿಯಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಪರಸ್ಪರ ಸಂತೋಷವನ್ನು ಹಂಚಿ ಬಾಳುವುದೇ ಕ್ರಿಸ್ಮಸ್ ಹಬ್ಬದ ನಿಜವಾದ ಅರ್ಥವಾಗಿದೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚ್ನ ಧರ್ಮಗುರು ಡೆನಿಸ್ ಡೆಸಾ ಹೇಳಿದರು.</p>.<p>ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಆಶ್ರಯದಲ್ಲಿ ಮಲ್ಪೆ ಸಿಎಸ್ಐ ಚರ್ಚ್ನಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ರಿಸ್ಮಸ್ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ರಿಸ್ಮಸ್ ಹಬ್ಬದ ಸಮಯದಲ್ಲಿ ಪರಸ್ಪರ ಶುಭಾಶಯ, ಸಿಹಿತಿಂಡಿಗಳನ್ನು ಹಂಚಿಕೊಂಡರೆ ಸಾಲದು, ಸಹಬಾಳ್ವೆಯ ಜೀವನವನ್ನು ಬಾಳುವುದರೊಂದಿಗೆ ಅದನ್ನು ಪ್ರತಿಯೊಬ್ಬರು ಜೀವನದಲ್ಲಿ ಅನುಕರಣೆ ಮಾಡಿದಾಗ ಮಾತ್ರ ಹಬ್ಬದ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದರು.</p>.<p>ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಅಧ್ಯಕ್ಷ ರಮೇಶ್ ತಿಂಗಳಾಯ ಮಾತನಾಡಿ, ಎಲ್ಲ ಧರ್ಮಗಳ ಆಚರಣೆಯಲ್ಲಿ ಸಾಮ್ಯತೆಗಳಿವೆ. ನಮ್ಮ ನೆರೆಯವರನ್ನು ಗೌರವಿಸಿ ನಡೆದಾಗ ಸೌಹಾರ್ದ ಸಮಾಜ ನಿರ್ಮಾಣಗೊಳ್ಳುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.</p>.<p>ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಲ್ಪೆ ನೆರ್ಗಿಯ ಕೃಷ್ಣಪ್ಪ ಹಾಗೂ ಯಶೋದಾ ದಂಪತಿ ಪುತ್ರಿ ಶ್ರುತಿ ಅವರಿಗೆ ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ವತಿಯಿಂದ ₹25 ಸಾವಿರ ಧನಸಹಾಯ ಹಸ್ತಾಂತರಿಸಲಾಯಿತು.</p>.<p>ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಿಎಸ್ಐ, ಯುಬಿಎಂ ಚರ್ಚ್ ಮಲ್ಪೆ, ತೊಟ್ಟಂ ಸಂತ ಅನ್ನಮ್ಮ ಚರ್ಚ್ನ ವತಿಯಿಂದ ಕ್ರಿಸ್ಮಸ್ ಸಂಬಂಧಿತ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿದವು.</p>.<p>ವೇದಿಕೆಯಲ್ಲಿ ಯುಬಿಎಂ ಚರ್ಚ್ ಮಲ್ಪೆ ಸಭಾ ಪಾಲಕರಾದ ಪಾಸ್ಟರ್ ಕುಮಾರ್ ಸಾಲಿನ್ಸ್, ಸಮಿತಿಯ ಪದಾಧಿಕಾರಿಗಳಾದ ವನಿತಾ ಫೆರ್ನಾಂಡಿಸ್, ಶಬೀರ್, ಸೀರಾಝ್, ತೊಟ್ಟಂ ಸಂತ ಅನ್ನಮ್ಮ ಚರ್ಚ್ನ ಪಾಲನ ಮಂಡಳಿ ಉಪಾಧ್ಯಕ್ಷ ಸುನೀಲ್ ಫೆರ್ನಾಂಡಿಸ್ ಇದ್ದರು.</p>.<p>ಸಿಎಸ್ಐ ಚರ್ಚ್ ಮಲ್ಪೆ ಸಭಾಪಾಲಕ ಪಾಸ್ಟರ್ ಎಡ್ವಿನ್ ಜೋಸೆಫ್ ಸ್ವಾಗತಿಸಿದರು. ಗಾಡ್ವಿನ್ ವಂದಿಸಿದರು. ಗ್ಲೋರಿಯಾ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>