<p><strong>ಉಡುಪಿ:</strong> ದೇವಪುತ್ರ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕ್ರೈಸ್ತರು ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.</p><p>ಹಬ್ಬದ ಅಂಗವಾಗಿ ಕ್ರೈಸ್ತ ಬಾಂಧವರು ಸಮೀಪದ ಚರ್ಚ್ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂಧು –ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು.</p><p>ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರು ಸಂಜೆಯ ಬಲಿಪೂಜೆಯನ್ನು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಅರ್ಪಿಸಿ ಹಬ್ಬದ ಸಂದೇಶ ನೀಡಿದರು.</p><p>ಈ ವೇಳೆ ಮಾತನಾಡಿದ ಅವರು ಕ್ರಿಸ್ತ ಜಯಂತಿ ಶಾಂತಿ ಮತ್ತು ಭರವಸೆಯ ಸಮಯವಾಗಿದ್ದು ಬೆತ್ಲೆಹೇಮಿನ ದನದ ಕೊಟ್ಟಿಗೆಯಲ್ಲಿ ದೀನನಾಗಿ ಜನಿಸಿದ ಪ್ರಭು ಏಸುವಿನ ಜನನ, ದೇವರು ನಮ್ಮ ಮೇಲಿರಿಸಿದ ಪ್ರೀತಿ ಸ್ಮರಣೆಯಾಗಿದೆ ಎಂದರು.</p><p>ಏಸು ಜಗಜ್ಯೋತಿಯಾಗಿ ಭುವಿಯ ಅಂಧಕಾರ ನೀಗಿಸಿದರು. ಕ್ರಿಸ್ಮಸ್ ಮನುಜನ ಬದುಕನ್ನು ಜ್ಯೋತಿಯಾಗಿ ಆಲಿಂಗಿಸಿ ಪ್ರೀತಿಯ ಸಿಂಚನವೆರೆದ ಹಬ್ಬ ಎಂದರು.</p><p>ಧರ್ಮಪ್ರಾಂತ್ಯದ ಶ್ರೇಷ್ಠಗುರು ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ಪ್ರದೀಪ್ ಕಾರ್ಡೋಜಾ, ಕಥೊಲಿಕ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ವಿನ್ಸೆಂಟ್ ಕ್ರಾಸ್ತಾ ಪಿಲಾರ್ ಸಭೆಯ ಪರೇಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.</p><p>ಜಿಲ್ಲೆಯ ಪ್ರಮುಖ ಚರ್ಚುಗಳಾದ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದಲ್ಲಿ ಆಲ್ಬನ್ ಡಿಸೋಜ, ತೊಟ್ಟಂ ಸಂತ ಅನ್ನಮ್ಮ ಚರ್ಚ್ನಲ್ಲಿ ಧರ್ಮಗುರು ಡೆನಿಸ್ ಡೆಸಾ, ಸಾಸ್ತಾನ ಸಂತ ಅಂತೋನಿ ಚರ್ಚ್ನಲ್ಲಿ ಸುನೀಲ್ ಡಿಸಿಲ್ವಾ, ಉಡುಪಿ ಶೋಕಮಾತಾ ಚರ್ಚ್ನಲ್ಲಿ ಚಾರ್ಲ್ಸ್ ಮಿನೇಜಸ್ ನೇತೃತ್ವದಲ್ಲಿ ಹಬ್ಬದ ವಿಶೇಷ ಬಲಿಪೂಜೆಗಳು ಜರುಗಿದವು.</p>.<p><strong>ಕ್ರಿಸ್ಮಸ್ ಸಂಭ್ರಮ</strong></p>.<p>ಕ್ರಿಸ್ಮಸ್ ಪ್ರಯುಕ್ತ ಚರ್ಚ್ಗಳು ವಿದ್ಯುತ್ ದೀಪಾಲಂಕಾರ, ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು. ಏಸುವಿನ ಜನ್ಮದಿನದ ಪ್ರಯುಕ್ತ ಮಾಡಿದ್ದ ಗೋದಲಿ ಹಾಗೂ ಪುಟ್ಟ ಗೊಂಬೆಗಳ ಪ್ರದರ್ಶನ ಆಕರ್ಷಣೆಯ ಕೇಂದ್ರ ಬಿಂದುಗಳಾಗಿದ್ದವು. ಏಸು ಕ್ರಿಸ್ತನ ಜನ್ಮ ವೃತ್ತಾಂತವನ್ನು ಗೋದಲಿಯಲ್ಲಿ ಪುಟ್ಟ ಗೊಂಬೆಗಳ ಮೂಲಕ ಪ್ರದರ್ಶಿಸಲಾಯಿತು. ಹಬ್ಬದ ಅಂಗವಾಗಿ ಚರ್ಚ್ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಸಾಂತಾಕ್ಲಾಸ್ ವೇಷದ ಪ್ರದರ್ಶನ, ಕ್ರಿಸ್ಮಸ್ ಕೇಕ್ ವಿತರಣೆ ಕೂಡ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ದೇವಪುತ್ರ ಏಸುವಿನ ಜನ್ಮದಿನ ಕ್ರಿಸ್ಮಸ್ ಈವ್ ಹಬ್ಬವನ್ನು ಬುಧವಾರ ರಾತ್ರಿ ಕ್ರೈಸ್ತರು ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.</p><p>ಹಬ್ಬದ ಅಂಗವಾಗಿ ಕ್ರೈಸ್ತ ಬಾಂಧವರು ಸಮೀಪದ ಚರ್ಚ್ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂಧು –ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು.</p><p>ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರು ಸಂಜೆಯ ಬಲಿಪೂಜೆಯನ್ನು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಅರ್ಪಿಸಿ ಹಬ್ಬದ ಸಂದೇಶ ನೀಡಿದರು.</p><p>ಈ ವೇಳೆ ಮಾತನಾಡಿದ ಅವರು ಕ್ರಿಸ್ತ ಜಯಂತಿ ಶಾಂತಿ ಮತ್ತು ಭರವಸೆಯ ಸಮಯವಾಗಿದ್ದು ಬೆತ್ಲೆಹೇಮಿನ ದನದ ಕೊಟ್ಟಿಗೆಯಲ್ಲಿ ದೀನನಾಗಿ ಜನಿಸಿದ ಪ್ರಭು ಏಸುವಿನ ಜನನ, ದೇವರು ನಮ್ಮ ಮೇಲಿರಿಸಿದ ಪ್ರೀತಿ ಸ್ಮರಣೆಯಾಗಿದೆ ಎಂದರು.</p><p>ಏಸು ಜಗಜ್ಯೋತಿಯಾಗಿ ಭುವಿಯ ಅಂಧಕಾರ ನೀಗಿಸಿದರು. ಕ್ರಿಸ್ಮಸ್ ಮನುಜನ ಬದುಕನ್ನು ಜ್ಯೋತಿಯಾಗಿ ಆಲಿಂಗಿಸಿ ಪ್ರೀತಿಯ ಸಿಂಚನವೆರೆದ ಹಬ್ಬ ಎಂದರು.</p><p>ಧರ್ಮಪ್ರಾಂತ್ಯದ ಶ್ರೇಷ್ಠಗುರು ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ಪ್ರದೀಪ್ ಕಾರ್ಡೋಜಾ, ಕಥೊಲಿಕ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ವಿನ್ಸೆಂಟ್ ಕ್ರಾಸ್ತಾ ಪಿಲಾರ್ ಸಭೆಯ ಪರೇಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.</p><p>ಜಿಲ್ಲೆಯ ಪ್ರಮುಖ ಚರ್ಚುಗಳಾದ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದಲ್ಲಿ ಆಲ್ಬನ್ ಡಿಸೋಜ, ತೊಟ್ಟಂ ಸಂತ ಅನ್ನಮ್ಮ ಚರ್ಚ್ನಲ್ಲಿ ಧರ್ಮಗುರು ಡೆನಿಸ್ ಡೆಸಾ, ಸಾಸ್ತಾನ ಸಂತ ಅಂತೋನಿ ಚರ್ಚ್ನಲ್ಲಿ ಸುನೀಲ್ ಡಿಸಿಲ್ವಾ, ಉಡುಪಿ ಶೋಕಮಾತಾ ಚರ್ಚ್ನಲ್ಲಿ ಚಾರ್ಲ್ಸ್ ಮಿನೇಜಸ್ ನೇತೃತ್ವದಲ್ಲಿ ಹಬ್ಬದ ವಿಶೇಷ ಬಲಿಪೂಜೆಗಳು ಜರುಗಿದವು.</p>.<p><strong>ಕ್ರಿಸ್ಮಸ್ ಸಂಭ್ರಮ</strong></p>.<p>ಕ್ರಿಸ್ಮಸ್ ಪ್ರಯುಕ್ತ ಚರ್ಚ್ಗಳು ವಿದ್ಯುತ್ ದೀಪಾಲಂಕಾರ, ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು. ಏಸುವಿನ ಜನ್ಮದಿನದ ಪ್ರಯುಕ್ತ ಮಾಡಿದ್ದ ಗೋದಲಿ ಹಾಗೂ ಪುಟ್ಟ ಗೊಂಬೆಗಳ ಪ್ರದರ್ಶನ ಆಕರ್ಷಣೆಯ ಕೇಂದ್ರ ಬಿಂದುಗಳಾಗಿದ್ದವು. ಏಸು ಕ್ರಿಸ್ತನ ಜನ್ಮ ವೃತ್ತಾಂತವನ್ನು ಗೋದಲಿಯಲ್ಲಿ ಪುಟ್ಟ ಗೊಂಬೆಗಳ ಮೂಲಕ ಪ್ರದರ್ಶಿಸಲಾಯಿತು. ಹಬ್ಬದ ಅಂಗವಾಗಿ ಚರ್ಚ್ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಸಾಂತಾಕ್ಲಾಸ್ ವೇಷದ ಪ್ರದರ್ಶನ, ಕ್ರಿಸ್ಮಸ್ ಕೇಕ್ ವಿತರಣೆ ಕೂಡ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>