ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು ತನಿಖೆ ಮುಂದುವರಿದಿದೆ. ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ತನಿಖಾಧಿಕಾರಿಯಾಗಿದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಪ್ರಕರಣದ ಮೇಲ್ವಿಚಾರಣೆ ನೋಡಿಕೊಳ್ಳಲಿದ್ದಾರೆ. ಎಫ್ಎಸ್ಎಲ್ ವರದಿ ಇನ್ನೂ ಕೈಸೇರಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಎಡಿಜಿಪಿ ಮನೀಶ್ ಕರ್ಬಿಕರ್ ಮಾಹಿತಿ ನೀಡಿದರು.