ಉಡುಪಿ: ಸುರಕ್ಷಿತ ಭಾರತ ನಿರ್ಮಾಣವಾಗಬೇಕಾದರೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಬೇಕು ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಅಭಿಪ್ರಾಯಪಟ್ಟರು.
ಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ನಡೆದ ಚಿಣ್ಣರ ಮಾಸೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ‘ಕಾಯ್ದೆ ಜಾರಿಯಿಂದ ಯಾರಿಗೂ ಹಾನಿ ಇಲ್ಲ. ಬದಲಾಗಿ, ಉಗ್ರರ ಹಾವಳಿ ತಪ್ಪಲಿದೆ. ಮಹಿಳೆಯರು ಮಧ್ಯರಾತ್ರಿಯಲ್ಲಿ ಆತಂಕವಿಲ್ಲದೆ ನಡೆದಾಡಬಹುದು’ ಎಂದರು.
ಭಾರತೀಯರಿಗೆ ರಕ್ಷಣೆ ನೀಡುವ ಕಾಯ್ದೆ ಇದಾಗಿದ್ದು, ಎಲ್ಲರೂ ಬೆಂಬಲಿಸಬೇಕು. ಸ್ವಚ್ಛಭಾರತದ ಜತೆಗೆ ಸುಭದ್ರ ಭಾರತ ನಿರ್ಮಾಣವಾಗಬೇಕು ಎಂದು ಸ್ವಾಮೀಜಿ ಹೇಳಿದರು.