<p><strong>ಉಡುಪಿ:</strong> ಗಾಂಧಿ ಜಯಂತಿ ಪ್ರಯುಕ್ತ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಕಥೊಲಿಕ್ ಸಭಾ, ಯುವ ಆಯೋಗ, ಮಹಿಳಾ ಆಯೋಗ ಮತ್ತು ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿಯ ವತಿಯಿಂದ ಶುಕ್ರವಾರ ತೊಟ್ಟಂ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮಕ್ಕೆ ಚರ್ಚ್ನ ಧರ್ಮಗುರು ಡೆನಿಸ್ ಡೆಸಾ ಚಾಲನೆ ನೀಡಿ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದರಿಂದ ತೊಟ್ಟಂ ವ್ಯಾಪ್ತಿಯ ಹಲವು ಪ್ರದೇಶಗಳು ಕಸಯುಕ್ತವಾಗಿವೆ. ಈ ಕುರಿತು ಸಾರ್ವಜನಿಕರು ಮೌನವಾಗಿರದೆ ಜನಪ್ರತಿನಿಧಿಗಳನ್ನು ಎಚ್ಚರಿಸುವುದರೊಂದಿಗೆ ಪರಿಸರದ ಸ್ವಚ್ಛತೆ ಕಾಪಾಡಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಮೆಸ್ಕಾಂ ಮಲ್ಪೆ ಶಾಖೆಯ ಲೈನ್ ಮ್ಯಾನ್ಗಳನ್ನು ಗೌರವಿಸಲಾಯಿತು.</p>.<p>ತೊಟ್ಟಂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಚೇರಿಯಿಂದ ಆರಂಭಿಸಿ ಬಡಾನಿಡಿಯೂರು ಶಾಲೆಯ ತನಕ 5 ಗುಂಪುಗಳಲ್ಲಿ ಕಸವನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ಥಳೀಯ ಮುಸ್ಲಿಂ ಮಹಿಳಾ ಸಂಘಟನೆ ಕೈ ಜೋಡಿಸಿತ್ತು.</p>.<p>ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷೆಲೆಸ್ಲಿ ಆರೋಝಾ, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, ಕಥೊಲಿಕ್ ಸಭಾ ಅಧ್ಯಕ್ಷರಾದ ವೀಣಾ ಫೆರ್ನಾಂಡಿಸ್, ಮಹಿಳಾ ಸಂಘಟನೆಯ ಅಧ್ಯಕ್ಷೆ ಪ್ರಿಯಾ ರೊಡ್ರಿಗಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಗಾಂಧಿ ಜಯಂತಿ ಪ್ರಯುಕ್ತ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಕಥೊಲಿಕ್ ಸಭಾ, ಯುವ ಆಯೋಗ, ಮಹಿಳಾ ಆಯೋಗ ಮತ್ತು ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿಯ ವತಿಯಿಂದ ಶುಕ್ರವಾರ ತೊಟ್ಟಂ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮಕ್ಕೆ ಚರ್ಚ್ನ ಧರ್ಮಗುರು ಡೆನಿಸ್ ಡೆಸಾ ಚಾಲನೆ ನೀಡಿ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದರಿಂದ ತೊಟ್ಟಂ ವ್ಯಾಪ್ತಿಯ ಹಲವು ಪ್ರದೇಶಗಳು ಕಸಯುಕ್ತವಾಗಿವೆ. ಈ ಕುರಿತು ಸಾರ್ವಜನಿಕರು ಮೌನವಾಗಿರದೆ ಜನಪ್ರತಿನಿಧಿಗಳನ್ನು ಎಚ್ಚರಿಸುವುದರೊಂದಿಗೆ ಪರಿಸರದ ಸ್ವಚ್ಛತೆ ಕಾಪಾಡಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಮೆಸ್ಕಾಂ ಮಲ್ಪೆ ಶಾಖೆಯ ಲೈನ್ ಮ್ಯಾನ್ಗಳನ್ನು ಗೌರವಿಸಲಾಯಿತು.</p>.<p>ತೊಟ್ಟಂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಚೇರಿಯಿಂದ ಆರಂಭಿಸಿ ಬಡಾನಿಡಿಯೂರು ಶಾಲೆಯ ತನಕ 5 ಗುಂಪುಗಳಲ್ಲಿ ಕಸವನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಸ್ಥಳೀಯ ಮುಸ್ಲಿಂ ಮಹಿಳಾ ಸಂಘಟನೆ ಕೈ ಜೋಡಿಸಿತ್ತು.</p>.<p>ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷೆಲೆಸ್ಲಿ ಆರೋಝಾ, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, ಕಥೊಲಿಕ್ ಸಭಾ ಅಧ್ಯಕ್ಷರಾದ ವೀಣಾ ಫೆರ್ನಾಂಡಿಸ್, ಮಹಿಳಾ ಸಂಘಟನೆಯ ಅಧ್ಯಕ್ಷೆ ಪ್ರಿಯಾ ರೊಡ್ರಿಗಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>