ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆಗುಡ್ಡೆ ದೇವಸ್ಥಾನಕ್ಕೆ ಸಿಎಂ ಭೇಟಿ: ಗಣಹೋಮದಲ್ಲಿ ಭಾಗಿ

Last Updated 19 ಜನವರಿ 2021, 7:47 IST
ಅಕ್ಷರ ಗಾತ್ರ

ಉಡುಪಿ: ಕುಂದಾಪುರ ತಾಲ್ಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗಣಹೋಮದಲ್ಲಿ ಭಾಗಿಯಾಗಿದ್ದರು.

ದೇವರಿಗೆ ಪೂಜೆ ಸಲ್ಲಿಸಿ ಗಣಹೋಮದಲ್ಲಿ ಭಾಗವಹಿಸಿ ಪೂರ್ಣಾಹುತಿ ಸಲ್ಲಿಸಿದರು.

ಸಿಎಂ ಭೇಟಿ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿರಲಿಲ್ಲ. ಮಾಧ್ಯಮಗಳಿಗೂ ಪ್ರವೇಶ ನಿರಾಕರಿಸಲಾಗಿತ್ತು. ಈಚೆಗಿನ ರಾಜಕೀಯ ಜಂಜಾಟಗಳಿಂದ ವಿಶ್ರಾಂತಿ ಪಡೆಯಲು, ಶಾಂತಿ ನೆಮ್ಮದಿಯಿಂದ ಆಡಳಿತ ದೇವರ ಪೂಜೆ ಹಾಗೂ ಗಣಹೋಮದಲ್ಲಿ ಭಾಗವಹಿಸುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿದರು.

ಇದಕ್ಕೂ ಮೊದಲು ಕಾಪು ತಾಲ್ಲೂಕಿನ ಹೆಜಮಾಡಿ ಮೀನಿಗಾರಿಕಾ ಬಂದರು ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. 181 ಕೋಟಿ ವೆಚ್ಚದಲ್ಲಿ ಹೆಜಮಾಡಿ ಬಂದರು ನಿರ್ಮಾಣವಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT