ಉಡುಪಿ: ಕುಂದಾಪುರ ತಾಲ್ಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಣಹೋಮದಲ್ಲಿ ಭಾಗಿಯಾಗಿದ್ದರು.
ದೇವರಿಗೆ ಪೂಜೆ ಸಲ್ಲಿಸಿ ಗಣಹೋಮದಲ್ಲಿ ಭಾಗವಹಿಸಿ ಪೂರ್ಣಾಹುತಿ ಸಲ್ಲಿಸಿದರು.
ಸಿಎಂ ಭೇಟಿ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿರಲಿಲ್ಲ. ಮಾಧ್ಯಮಗಳಿಗೂ ಪ್ರವೇಶ ನಿರಾಕರಿಸಲಾಗಿತ್ತು. ಈಚೆಗಿನ ರಾಜಕೀಯ ಜಂಜಾಟಗಳಿಂದ ವಿಶ್ರಾಂತಿ ಪಡೆಯಲು, ಶಾಂತಿ ನೆಮ್ಮದಿಯಿಂದ ಆಡಳಿತ ದೇವರ ಪೂಜೆ ಹಾಗೂ ಗಣಹೋಮದಲ್ಲಿ ಭಾಗವಹಿಸುತ್ತಿರುವುದಾಗಿ ಯಡಿಯೂರಪ್ಪ ತಿಳಿಸಿದರು.
ಇದಕ್ಕೂ ಮೊದಲು ಕಾಪು ತಾಲ್ಲೂಕಿನ ಹೆಜಮಾಡಿ ಮೀನಿಗಾರಿಕಾ ಬಂದರು ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. 181 ಕೋಟಿ ವೆಚ್ಚದಲ್ಲಿ ಹೆಜಮಾಡಿ ಬಂದರು ನಿರ್ಮಾಣವಾಗುತ್ತಿದೆ.