ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆಸಚಿವರಾದ ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ,ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಮುಂತಾದವರುಹಾಜರಿದ್ದರು.
ಪೇಜಾವರ ಶ್ರೀಗಳು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು,ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ಶನಿವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿ ಅವರು, 'ಶ್ರೀಗಳು ಚೇತರಿಸಿಕೊಳ್ಳುವ ವಿಶ್ವಾಸವಿದೆ. ವಯೋಸಹಜದ ಕಾರಣ ಆರೋಗ್ಯ ಸುಧಾರಣೆ ತಡವಾಗುತ್ತಿದೆ. ಶ್ರೀಗಳಿಗೆ ಬೇರೆ ಯಾವುದೇ ಕಾಯಿಲೆಗಳಿಲ್ಲವಾದ್ದರಿಂದ ಗುಣಮುಖರಾಗುವ ವಿಶ್ವಾಸವಿದೆ. ಅವರ ಆರೋಗ್ಯಕ್ಕೆ ಭಕ್ತರ ಪ್ರಾರ್ಥನೆ ಮುಖ್ಯ' ಎಂದರು.
ಶ್ರೀಗಳ ಅನಾರೋಗ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಇದೇ ವೇಳೆ ವಿರೇಂದ್ರ ಹೆಗ್ಗಡೆಮನವಿ ಮಾಡಿದರು.