ಕುಂದಾಪುರದಿಂದ ಸಿದ್ದಾಪುರಕ್ಕೆ ತೆರಳುವ ಖಾಸಗಿ ಬಸ್ ಹಾಗೂ ಕುಂದಾಪುರ ಕಡೆಗೆ ತೆರಳುವ ಕಾರಿನ ನಡುವೆ ಅಪಘಾತದಲ್ಲಿ ಮಲ್ಯಾಡಿ ದೀಕ್ಷಿತ್ ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಹೊಸಮಠ ಹಾಗೂ ಅರುಣ್ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿಯೇ ಕಿರಣ್ ಹೊಸಮಠ ಮೃತರಾಗಿದ್ದಾರೆ. ಅರುಣ್ಗೆ ಚಿಕಿತ್ಸೆ ನಡೆಯುತ್ತಿದೆ. ಮನೀಶ್ ಹಾಗೂ ಜೀವನಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.