<p><strong>ಉಡುಪಿ:</strong> ಮೊದಲು ಕುತೂಹಲಕ್ಕಾಗಿ ಆರಂಭಿಸುವ ಮಾದಕ ವ್ಯಸನವೂ ಬಳಿಕ ಚಟವಾಗಿ ಮಾರ್ಪಾಡುತ್ತದೆ. ಅಪಾಯದ ದಾರಿಯಲ್ಲಿ ಸಾಗುವಂತೆ ಮಾಡಿ ಅಪರಾಧ ಚಟುವಟಿಕೆಗೆ ಇಳಿಸುವ ಈ ವ್ಯಸನದ ಕುರಿತು ಯುವಜನರಿಗೆ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹೇಳಿದರು.</p>.<p>ಉಡುಪಿ ಜಿಲ್ಲಾ ಪೊಲೀಸ್ ಹಾಗೂ ರೋಟರಿ ಕ್ಲಬ್ ಉಡುಪಿ ರಾಯಲ್ ಸಹಭಾಗಿತ್ವದಲ್ಲಿ ಮಾದಕ ವ್ಯಸನ ವಿರೋಽಧಿ ಮಾಸಾಚರಣೆ ಪ್ರಯುಕ್ತ ಶನಿವಾರ ಮಣಿಪಾಲ ಕೆನರಾ ಮಾಲ್ನಲ್ಲಿ ಆಯೋಜಿಸಲಾದ ಸೆಲ್ಫಿ ವಿದ್ ಸಹಿ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ಮಾದಕ ದ್ರವ್ಯವನ್ನು ಯುವ ಸಮುದಾಯದ ಸಂಪೂರ್ಣವಾಗಿ ತಿರಸ್ಕರಿಸಬೇಕು. ಒಮ್ಮೆ ಇದರ ಚಟಕ್ಕೆ ದಾಸರಾದರೆ ಇಡೀ ಜೀವನವೇ ನರಕ ಆಗುತ್ತದೆ. ಹಾಗಾಗಿ ಯುವ ಸಮುದಾಯ ಮಾದಕ ದ್ರವ್ಯಗಳ ಬಗ್ಗೆ ಹೆಚ್ಚು ಎಚ್ಚರವಹಿಸುವ ಅಗತ್ಯವಿದೆ ಎಂದರು.</p>.<p>ಅಭಿಯಾನಕ್ಕೆ ಚಾಲನೆ ನೀಡಿದ ತುಳು ಹಾಗೂ ಕನ್ನಡ ಚಿತ್ರನಟ ಪೃಥ್ವಿ ಅಂಬರ್ ಮಾತನಾಡಿ, ಕುತೂಹಲ ಹಾಗೂ ಮಾನಸಿಕ ಸಮಸ್ಯೆಯಿಂದಾಗಿ ಆರಂಭವಾಗುವ ಮಾದಕ ವ್ಯಸನ ಚಟವು ಮುಂದೆ ನಮ್ಮನ್ನು ದಾಸರನ್ನಾಗಿ ಮಾಡುತ್ತದೆ. ಇದರಿಂದಾಗಿ ಅಪರಾಧ ಚಟುವಟಿಕೆ, ಏಕಾಂಗಿತನ, ಮಾನಸಿಕ ಕಾಯಿಲೆಗಳಿಗೆ ತುತ್ತಾಗುತ್ತೇವೆ. ಈ ಮೂಲಕ ನಮ್ಮ ಸಾಮಾಜಿಕ ಹಾಗೂ ಕೌಟುಂಬಿ ಬದುಕನ್ನು ನಾವೇ ಹಾಳು ಮಾಡಿಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಮಾದಕ ವ್ಯಸನದಿಂದ ದೂರ ಉಳಿಯಬೇಕು ಎಂದು ಕರೆ ನೀಡಿದರು.</p>.<p>ರೋಟರಿ ಕ್ಲಬ್ ಅಧ್ಯಕ್ಷ ಯಶವಂತ್, ಕೆನರಾ ಮಾಲ್ ಮ್ಯಾನೇಜರ್ ಪ್ರಕಾಶ್ ಕಾಮತ್, ದಿನೇಶ್ ಹೆಗ್ಡೆ ಆತ್ರಾಡಿ, ರೋಟರ್ಯಾಕ್ಟ್ ಕ್ಲಬ್ನ ಆಶೀರ್ ಉಪಸ್ಥಿತರಿದ್ದರು. ಉಡುಪಿ ಡಿವೈಎಸ್ಪಿ ಜೈಶಂಕರ್ ವಂದಿಸಿದರು. ಶಿವಾನಂದ ನಾಯರಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮೊದಲು ಕುತೂಹಲಕ್ಕಾಗಿ ಆರಂಭಿಸುವ ಮಾದಕ ವ್ಯಸನವೂ ಬಳಿಕ ಚಟವಾಗಿ ಮಾರ್ಪಾಡುತ್ತದೆ. ಅಪಾಯದ ದಾರಿಯಲ್ಲಿ ಸಾಗುವಂತೆ ಮಾಡಿ ಅಪರಾಧ ಚಟುವಟಿಕೆಗೆ ಇಳಿಸುವ ಈ ವ್ಯಸನದ ಕುರಿತು ಯುವಜನರಿಗೆ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹೇಳಿದರು.</p>.<p>ಉಡುಪಿ ಜಿಲ್ಲಾ ಪೊಲೀಸ್ ಹಾಗೂ ರೋಟರಿ ಕ್ಲಬ್ ಉಡುಪಿ ರಾಯಲ್ ಸಹಭಾಗಿತ್ವದಲ್ಲಿ ಮಾದಕ ವ್ಯಸನ ವಿರೋಽಧಿ ಮಾಸಾಚರಣೆ ಪ್ರಯುಕ್ತ ಶನಿವಾರ ಮಣಿಪಾಲ ಕೆನರಾ ಮಾಲ್ನಲ್ಲಿ ಆಯೋಜಿಸಲಾದ ಸೆಲ್ಫಿ ವಿದ್ ಸಹಿ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ಮಾದಕ ದ್ರವ್ಯವನ್ನು ಯುವ ಸಮುದಾಯದ ಸಂಪೂರ್ಣವಾಗಿ ತಿರಸ್ಕರಿಸಬೇಕು. ಒಮ್ಮೆ ಇದರ ಚಟಕ್ಕೆ ದಾಸರಾದರೆ ಇಡೀ ಜೀವನವೇ ನರಕ ಆಗುತ್ತದೆ. ಹಾಗಾಗಿ ಯುವ ಸಮುದಾಯ ಮಾದಕ ದ್ರವ್ಯಗಳ ಬಗ್ಗೆ ಹೆಚ್ಚು ಎಚ್ಚರವಹಿಸುವ ಅಗತ್ಯವಿದೆ ಎಂದರು.</p>.<p>ಅಭಿಯಾನಕ್ಕೆ ಚಾಲನೆ ನೀಡಿದ ತುಳು ಹಾಗೂ ಕನ್ನಡ ಚಿತ್ರನಟ ಪೃಥ್ವಿ ಅಂಬರ್ ಮಾತನಾಡಿ, ಕುತೂಹಲ ಹಾಗೂ ಮಾನಸಿಕ ಸಮಸ್ಯೆಯಿಂದಾಗಿ ಆರಂಭವಾಗುವ ಮಾದಕ ವ್ಯಸನ ಚಟವು ಮುಂದೆ ನಮ್ಮನ್ನು ದಾಸರನ್ನಾಗಿ ಮಾಡುತ್ತದೆ. ಇದರಿಂದಾಗಿ ಅಪರಾಧ ಚಟುವಟಿಕೆ, ಏಕಾಂಗಿತನ, ಮಾನಸಿಕ ಕಾಯಿಲೆಗಳಿಗೆ ತುತ್ತಾಗುತ್ತೇವೆ. ಈ ಮೂಲಕ ನಮ್ಮ ಸಾಮಾಜಿಕ ಹಾಗೂ ಕೌಟುಂಬಿ ಬದುಕನ್ನು ನಾವೇ ಹಾಳು ಮಾಡಿಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಮಾದಕ ವ್ಯಸನದಿಂದ ದೂರ ಉಳಿಯಬೇಕು ಎಂದು ಕರೆ ನೀಡಿದರು.</p>.<p>ರೋಟರಿ ಕ್ಲಬ್ ಅಧ್ಯಕ್ಷ ಯಶವಂತ್, ಕೆನರಾ ಮಾಲ್ ಮ್ಯಾನೇಜರ್ ಪ್ರಕಾಶ್ ಕಾಮತ್, ದಿನೇಶ್ ಹೆಗ್ಡೆ ಆತ್ರಾಡಿ, ರೋಟರ್ಯಾಕ್ಟ್ ಕ್ಲಬ್ನ ಆಶೀರ್ ಉಪಸ್ಥಿತರಿದ್ದರು. ಉಡುಪಿ ಡಿವೈಎಸ್ಪಿ ಜೈಶಂಕರ್ ವಂದಿಸಿದರು. ಶಿವಾನಂದ ನಾಯರಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>