ಅಭಿಯಾನಕ್ಕೆ ಚಾಲನೆ ನೀಡಿದ ತುಳು ಹಾಗೂ ಕನ್ನಡ ಚಿತ್ರನಟ ಪೃಥ್ವಿ ಅಂಬರ್ ಮಾತನಾಡಿ, ಕುತೂಹಲ ಹಾಗೂ ಮಾನಸಿಕ ಸಮಸ್ಯೆಯಿಂದಾಗಿ ಆರಂಭವಾಗುವ ಮಾದಕ ವ್ಯಸನ ಚಟವು ಮುಂದೆ ನಮ್ಮನ್ನು ದಾಸರನ್ನಾಗಿ ಮಾಡುತ್ತದೆ. ಇದರಿಂದಾಗಿ ಅಪರಾಧ ಚಟುವಟಿಕೆ, ಏಕಾಂಗಿತನ, ಮಾನಸಿಕ ಕಾಯಿಲೆಗಳಿಗೆ ತುತ್ತಾಗುತ್ತೇವೆ. ಈ ಮೂಲಕ ನಮ್ಮ ಸಾಮಾಜಿಕ ಹಾಗೂ ಕೌಟುಂಬಿ ಬದುಕನ್ನು ನಾವೇ ಹಾಳು ಮಾಡಿಕೊಳ್ಳುತ್ತೇವೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಮಾದಕ ವ್ಯಸನದಿಂದ ದೂರ ಉಳಿಯಬೇಕು ಎಂದು ಕರೆ ನೀಡಿದರು.