<p><strong>ಬ್ರಹ್ಮಾವರ:</strong> ಕಂಪ್ಯೂಟರ್ ಕೌಶಲ ಕರಗತ ಮಾಡಿಕೊಳ್ಳುವುದು ಅಗತ್ಯ. ಹಾಗಾಗಿ ಛಲದಿಂದ ಮುಂದುವರಿಯಿರಿ ಎಂದು ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜಿನ ಉಪನ್ಯಾಸಕ ಭರತ್ರಾಜ್ ಹೇಳಿದರು.</p>.<p>ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯಲ್ಲಿ ಶನಿವಾರ ಆರಂಭವಾದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ ಎಂ ಅಧ್ಯಕ್ಷತೆ ವಹಿಸಿ ಟ್ಯಾಲಿ, ಜಿ.ಎಸ್.ಟಿ, ಟೈಪಿಂಗ್ ಮುಂತಾದವು ಅಗತ್ಯದ ವಿಷಯಗಳು. ಹಾಗಾಗಿ ಅಂಜಿಕೆಯಿಲ್ಲದೆ ಆಸಕ್ತಿಯಿಂದ ತರಬೇತಿಯನ್ನು ಪಡೆದು ಸ್ವಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ ಎಂದರು.</p>.<p>ತರಬೇತಿಯ ಅತಿಥಿ ಉಪನ್ಯಾಸಕಿ ರಾಜಲಕ್ಷ್ಮಿ ಇದ್ದರು. ರುಡ್ಸೆಟ್ ಸಂಸ್ಥೆಯ ಉಪನ್ಯಾಸಕಿ ಚೈತ್ರಾ ಕೆ ನಿರೂಪಿಸಿದರು. ಉಪನ್ಯಾಸಕ ಸಂತೋಷ ಶೆಟ್ಟಿ ಸ್ವಾಗತಿಸಿದರು. ಕಚೇರಿ ಸಹಾಯಕ ಶಾಂತಪ್ಪ ವಂದಿಸಿದರು.</p>
<p><strong>ಬ್ರಹ್ಮಾವರ:</strong> ಕಂಪ್ಯೂಟರ್ ಕೌಶಲ ಕರಗತ ಮಾಡಿಕೊಳ್ಳುವುದು ಅಗತ್ಯ. ಹಾಗಾಗಿ ಛಲದಿಂದ ಮುಂದುವರಿಯಿರಿ ಎಂದು ಬ್ರಹ್ಮಾವರ ಎಸ್.ಎಂ.ಎಸ್ ಕಾಲೇಜಿನ ಉಪನ್ಯಾಸಕ ಭರತ್ರಾಜ್ ಹೇಳಿದರು.</p>.<p>ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯಲ್ಲಿ ಶನಿವಾರ ಆರಂಭವಾದ ಕಂಪ್ಯೂಟರೈಸ್ಡ್ ಅಕೌಂಟಿಂಗ್ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ ಎಂ ಅಧ್ಯಕ್ಷತೆ ವಹಿಸಿ ಟ್ಯಾಲಿ, ಜಿ.ಎಸ್.ಟಿ, ಟೈಪಿಂಗ್ ಮುಂತಾದವು ಅಗತ್ಯದ ವಿಷಯಗಳು. ಹಾಗಾಗಿ ಅಂಜಿಕೆಯಿಲ್ಲದೆ ಆಸಕ್ತಿಯಿಂದ ತರಬೇತಿಯನ್ನು ಪಡೆದು ಸ್ವಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ ಎಂದರು.</p>.<p>ತರಬೇತಿಯ ಅತಿಥಿ ಉಪನ್ಯಾಸಕಿ ರಾಜಲಕ್ಷ್ಮಿ ಇದ್ದರು. ರುಡ್ಸೆಟ್ ಸಂಸ್ಥೆಯ ಉಪನ್ಯಾಸಕಿ ಚೈತ್ರಾ ಕೆ ನಿರೂಪಿಸಿದರು. ಉಪನ್ಯಾಸಕ ಸಂತೋಷ ಶೆಟ್ಟಿ ಸ್ವಾಗತಿಸಿದರು. ಕಚೇರಿ ಸಹಾಯಕ ಶಾಂತಪ್ಪ ವಂದಿಸಿದರು.</p>