ಬಿಜೆಪಿ ಬೈಂದೂರು ಮಂಡಲದ ವತಿಯಿಂದ ನಾವುಂದ ಮಾಲಸಾ ಮಾಂಗಲ್ಯ ಆರ್ಕೆಡ್ನಲ್ಲಿ ಭಾನುವಾರ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಉಭಯರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಅವರು ಮಾತನಾಡಿದರು. ವೃತ್ತಿಪರ ಛಾಯಾಗ್ರಾಹಕರಾಗಿದ್ದ ಅಶೋಕಕುಮಾರ ಶೆಟ್ಟಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತೊಡಗಿಕೊಂಡು ಪಕ್ಷ ಸಂಘಟನೆ ಹಾಗೂ ಗ್ರಾಮಾಭಿವೃದ್ಧಿಗೆ ಶ್ರಮಿಸಿದ್ದರು. ಛಾಯಾಗ್ರಾಹಕರ ನಾಯಕರಾಗಿ ಸಮಸ್ಯೆಗಳಿಗೆ ಸ್ಪಂದಿಸಿದ್ದರು. ರಾಜೇಶ ಉಪ್ಪಿನಕುದ್ರು ಸಂಘ ಮತ್ತು ಪಕ್ಷ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಲಸಿಕೆ ಅಭಿಯಾನ, ರಾಮಜನ್ಮ ಭೂಮಿ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದರು ಎಂದರು.