ನಾಡಗೀತೆ ಗೊಂದಲ ಶೀಘ್ರ ನಿವಾರಣೆ

ಉಡುಪಿ: ನಾಡಗೀತೆಗೆ ರಾಗ ಸಂಯೋಜನೆ ಹಾಗೂ ಕಾಲಮಿತಿ ನಿಗದಿಪಡಿಸಲು ರಚಿಸಲಾಗಿದ್ದ ಸಮಿತಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದು, ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
'ಅಲ್ಪಬುದ್ಧಿ ಇರುವವರು ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸುತ್ತಾರೆ. ಎನ್ಇಪಿಯಲ್ಲಿ ಸಾಮಾನ್ಯ ಹಾಗೂ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ಇದೆ. ಕನ್ನಡ ಭಾಷೆಗೆ ಒತ್ತು ನೀಡಲಾಗಿದೆ. ಅರ್ಧಂಬರ್ಧ ತಿಳಿದವರು ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ಮಾತನಾಡುತ್ತಾರೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.