<p><strong>ಕುಂದಾಪುರ</strong>: ಇಲ್ಲಿಗೆ ಸಮೀಪದ ಆನಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಾರೆನ್ಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಭಾಕರ ಮೊಗವೀರ ಆಯ್ಕೆಯಾಗಿದ್ದಾರೆ.</p>.<p>ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಾಗಿತ್ತು.</p>.<p>ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ಲಾರೆನ್ಸ್ ಡಿಸೋಜ ಅವಿರೋಧ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಏರ್ಪಟ್ಟು ಬಿಜೆಪಿ ಬೆಂಬಲಿತ ಪ್ರಭಾಕರ ಮೊಗವೀರ ಹಾಗೂ ಪಕ್ಷೇತರ ಮೂಕಾಂಬು ನಾಮಪತ್ರ ಸಲ್ಲಿಸಿದ್ದರು. ಪ್ರಭಾಕರ ಮೊಗವೀರ 6 ಮತ ಪಡೆದರೆ, ಮೂಕಾಂಬು 2 ಮತ ಪಡೆದರು.</p>.<p>ಚುನಾವಣಾಧಿಕಾರಿಯಾಗಿ ತೋಟಗಾರಿಕಾ ಅಧಿಕಾರಿ ಸಂಜೀವ ನಾಯ್ಕ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸುನಿಲ್ ಹೇರಿಕುದ್ರು, ಗೋಪಾಲ ಕಳಂಜಿ, ಕಾಂಗ್ರೆಸ್ ಮುಖಂಡರಾದ ಗಂಗಾಧರ ಶೆಟ್ಟಿ , ವಿನೋದ್ ಕ್ರಾಸ್ತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ</strong>: ಇಲ್ಲಿಗೆ ಸಮೀಪದ ಆನಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಾರೆನ್ಸ್ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಭಾಕರ ಮೊಗವೀರ ಆಯ್ಕೆಯಾಗಿದ್ದಾರೆ.</p>.<p>ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಾಗಿತ್ತು.</p>.<p>ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ಲಾರೆನ್ಸ್ ಡಿಸೋಜ ಅವಿರೋಧ ಆಯ್ಕೆಯಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಏರ್ಪಟ್ಟು ಬಿಜೆಪಿ ಬೆಂಬಲಿತ ಪ್ರಭಾಕರ ಮೊಗವೀರ ಹಾಗೂ ಪಕ್ಷೇತರ ಮೂಕಾಂಬು ನಾಮಪತ್ರ ಸಲ್ಲಿಸಿದ್ದರು. ಪ್ರಭಾಕರ ಮೊಗವೀರ 6 ಮತ ಪಡೆದರೆ, ಮೂಕಾಂಬು 2 ಮತ ಪಡೆದರು.</p>.<p>ಚುನಾವಣಾಧಿಕಾರಿಯಾಗಿ ತೋಟಗಾರಿಕಾ ಅಧಿಕಾರಿ ಸಂಜೀವ ನಾಯ್ಕ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಬಿಜೆಪಿ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸುನಿಲ್ ಹೇರಿಕುದ್ರು, ಗೋಪಾಲ ಕಳಂಜಿ, ಕಾಂಗ್ರೆಸ್ ಮುಖಂಡರಾದ ಗಂಗಾಧರ ಶೆಟ್ಟಿ , ವಿನೋದ್ ಕ್ರಾಸ್ತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>