ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕೆಪಿಸಿಸಿಗೆ ಅರ್ಜಿ

Last Updated 14 ನವೆಂಬರ್ 2022, 16:34 IST
ಅಕ್ಷರ ಗಾತ್ರ

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಲ್ಲಿ ಅಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್‌ ನೀಡುವಂತೆ ಮೂವರು ಆಕಾಂಕ್ಷಿಗಳು ಕೆಪಿಸಿಸಿ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛೆ ಹೊಂದಿರುವ ಆಕಾಂಕ್ಷಿಗಳು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕು ಎಂಬ ನಿಯಮ ಇರುವ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿ ಹಾಲಿ ಉಡುಪಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ರಮೇಶ್ ಕಾಂಚನ್‌ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು.

ಕೆಪಿಸಿಸಿ ಸಂಯೋಜಕ ಮುರಳಿ ಶೆಟ್ಟಿ, ಮುಖಂಡರಾದ ಡಾ.ವಿಜಯ್ ಕುಮಾರ್, ವಿಶ್ವಾಸ್ ಅಮೀನ್, ಗಣೇಶ್ ದೇವಾಡಿಗ, ಶರತ್ ಶೆಟ್ಟಿ, ಪ್ರಿತೇಶ್ ಪೂಜಾರಿ ಚಿಟ್ಪಾಡಿ, ಸಂದೇಶ್ ಶೆಟ್ಟಿ, ರಕ್ಷಿತ್, ರಿತೇಶ್ ಸಾಲ್ಯಾನ್, ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

ಪ್ರಖ್ಯಾತ್ ಶೆಟ್ಟಿ ಆಕಾಂಕ್ಷಿ:

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಕೂಡ ಉಡುಪಿ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಮುಖಂಡರಾದ ಯತೀಶ್ ಕರ್ಕೇರ, ವಿಶ್ವಾಸ್ ಅಮೀನ್, ರೋಷನ್ ಶೆಟ್ಟಿ, ಪ್ರದೀಪ್ ಅಂಚನ್, ಅಬೂಬಕರ್, ಧನುಷ್ ಶೆಟ್ಟಿ ಇದ್ದರು.

ಮತ್ತೊಬ್ಬರು ಆಕಾಂಕ್ಷಿಯಾಗಿರುವ ಕೃಷ್ಣಮೂರ್ತಿ ಆಚಾರ್ಯ ಕೂಡ ತಮ್ಮ ಬೆಂಬಲಿಗರೊಂದಿಗೆ ಟಿಕೆಟ್‌ ಕೋರಿ ಅರ್ಜಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT