ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಆಂಬುಲೆನ್ಸ್ ಹಾಗೂ 8 ವೈದ್ಯಕೀಯ ತುರ್ತು ವಾಹನಗಳಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಜಿಲ್ಲಾ ಕಾಂಗ್ರೆಸ್ ಕೈಜೋಡಿಸಿದೆ. ಕರ್ಫ್ಯೂ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದವರ ನೆರವಿಗೆ ಜಿಲ್ಲಾ ಕಾಂಗ್ರೆಸ್ನಿಂದ ಕ್ಷೇತ್ರವಾರು ಸಹಾಯವಾಣಿ ಮತ್ತು ಉಚಿತ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ ಎಂದು ತಿಳಿಸಿದರು.