<p><strong>ಕಾರ್ಕಳ: </strong>ಕೇಂದ್ರ ಅಗ್ನಿಪಥ ಹೆಸರಲ್ಲಿ ಸೇನೆಗೆ ಅಲ್ಪಾವಧಿ ನೆಲೆಯ ಗುತ್ತಿಗೆ ಆಧಾರದ ನೇಮಕಾತಿ ಯೋಜನೆ ಹಮ್ಮಿಕೊಂಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದರು.</p>.<p>ಲಿಖಿತ ಪರೀಕ್ಷೆ ಮುಗಿಸಿ ನೇಮಕಾತಿ ಪ್ರಕ್ರಿಯೆಗಾಗಿ ಕಾಯುತ್ತಿರುವವರಿಗೆ ಇದು ನಿರಾಶೆ ತಂದಿದೆ. ದೇಶದಲ್ಲಿ ಕೋವಿಡ್ –19, ನಿರುದ್ಯೋಗ, ಆರ್ಥಿಕ ಹಿಂಜರಿತದ ನಡುವೆಯೂ ತನ್ನ ವೈಯಕ್ತಿಕ ಪ್ರತಿಷ್ಠೆಗಾಗಿ ‘ನಮೋ ಟ್ರಂಪ್’ ಹೆಸರಲ್ಲಿ ಸರ್ಕಾರ ನೂರಾರು ಕೋಟಿ ಖರ್ಚು ಮಾಡಿತ್ತು. ಕಳೆದ 2 ವರ್ಷಗಳಿಂದ ಅದೇ ಕಾರಣ ಮುಂದಿಟ್ಟು ಸೇನಾಪಡೆಗೆ ನೇಮಕಾತಿ ಮಾಡದೇ ಇರುವ ಔಚಿತ್ಯ ಸರಿಯಲ್ಲ. ಮೋದಿ ಸರ್ಕಾರ ತನ್ನ ಆಡಳಿತ ವೈಫಲ್ಯದ ಕಾರಣವಾಗಿ ದೇಶವನ್ನು ಅಗ್ನಿಪಥಕ್ಕೆ ತಳ್ಳಿ ಅಭಿವೃದ್ಧಿಗೆ ಕೊಳ್ಳಿ ಇಟ್ಟಿದೆ. ಅಗ್ನಿಪಥ ಯೋಜನೆ ದೇಶದ ಸೇನೆಯಲ್ಲಿ ಸೇವೆ ಮಾಡಬೇಕೆಂಬ ಈ ದೇಶದ ಯುವಕರ ರಾಷ್ಟ್ರಾಭಿಮಾನದ ಕೆಚ್ಚನ್ನು ಕೆರಳಿಸಿದೆ.</p>.<p>ಈ ಅವೈಜ್ಞಾನಿಕ ಯೋಜನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ದೇಶದಾದ್ಯಂತ ಯುವಕರು ಉಗ್ರ ಪ್ರತಿಭಟನೆ ಮಾಡುತ್ತಿರುವುದರ ಹೊರತಾಗಿಯೂ, ಸರ್ಕಾರ ಸೇನಾ ಪಡೆಯ ಮುಖ್ಯಸ್ಥರ ಮೂಲಕ ಯೋಜನೆಯನ್ನು ಹಿಂಪಡೆಯುವುದಿಲ್ಲ ಎಂಬ ಹೇಳಿಕೆ ಕೊಡಿಸುವ, ಬೆದರಿಸುವ ತಂತ್ರಗಾರಿಕೆಗೆ ಶರಣಾಗಿರುವುದು ಸಾಂವಿಧಾನಿಕ ಉಲ್ಲಂಘನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರ್ಕಳ: </strong>ಕೇಂದ್ರ ಅಗ್ನಿಪಥ ಹೆಸರಲ್ಲಿ ಸೇನೆಗೆ ಅಲ್ಪಾವಧಿ ನೆಲೆಯ ಗುತ್ತಿಗೆ ಆಧಾರದ ನೇಮಕಾತಿ ಯೋಜನೆ ಹಮ್ಮಿಕೊಂಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದರು.</p>.<p>ಲಿಖಿತ ಪರೀಕ್ಷೆ ಮುಗಿಸಿ ನೇಮಕಾತಿ ಪ್ರಕ್ರಿಯೆಗಾಗಿ ಕಾಯುತ್ತಿರುವವರಿಗೆ ಇದು ನಿರಾಶೆ ತಂದಿದೆ. ದೇಶದಲ್ಲಿ ಕೋವಿಡ್ –19, ನಿರುದ್ಯೋಗ, ಆರ್ಥಿಕ ಹಿಂಜರಿತದ ನಡುವೆಯೂ ತನ್ನ ವೈಯಕ್ತಿಕ ಪ್ರತಿಷ್ಠೆಗಾಗಿ ‘ನಮೋ ಟ್ರಂಪ್’ ಹೆಸರಲ್ಲಿ ಸರ್ಕಾರ ನೂರಾರು ಕೋಟಿ ಖರ್ಚು ಮಾಡಿತ್ತು. ಕಳೆದ 2 ವರ್ಷಗಳಿಂದ ಅದೇ ಕಾರಣ ಮುಂದಿಟ್ಟು ಸೇನಾಪಡೆಗೆ ನೇಮಕಾತಿ ಮಾಡದೇ ಇರುವ ಔಚಿತ್ಯ ಸರಿಯಲ್ಲ. ಮೋದಿ ಸರ್ಕಾರ ತನ್ನ ಆಡಳಿತ ವೈಫಲ್ಯದ ಕಾರಣವಾಗಿ ದೇಶವನ್ನು ಅಗ್ನಿಪಥಕ್ಕೆ ತಳ್ಳಿ ಅಭಿವೃದ್ಧಿಗೆ ಕೊಳ್ಳಿ ಇಟ್ಟಿದೆ. ಅಗ್ನಿಪಥ ಯೋಜನೆ ದೇಶದ ಸೇನೆಯಲ್ಲಿ ಸೇವೆ ಮಾಡಬೇಕೆಂಬ ಈ ದೇಶದ ಯುವಕರ ರಾಷ್ಟ್ರಾಭಿಮಾನದ ಕೆಚ್ಚನ್ನು ಕೆರಳಿಸಿದೆ.</p>.<p>ಈ ಅವೈಜ್ಞಾನಿಕ ಯೋಜನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ದೇಶದಾದ್ಯಂತ ಯುವಕರು ಉಗ್ರ ಪ್ರತಿಭಟನೆ ಮಾಡುತ್ತಿರುವುದರ ಹೊರತಾಗಿಯೂ, ಸರ್ಕಾರ ಸೇನಾ ಪಡೆಯ ಮುಖ್ಯಸ್ಥರ ಮೂಲಕ ಯೋಜನೆಯನ್ನು ಹಿಂಪಡೆಯುವುದಿಲ್ಲ ಎಂಬ ಹೇಳಿಕೆ ಕೊಡಿಸುವ, ಬೆದರಿಸುವ ತಂತ್ರಗಾರಿಕೆಗೆ ಶರಣಾಗಿರುವುದು ಸಾಂವಿಧಾನಿಕ ಉಲ್ಲಂಘನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>