<p><strong>ಉಡುಪಿ</strong>: ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗುವ ಅಪಾಯಗಳನ್ನು ಎದುರಿಸುವ ಪ್ರಜ್ಞಾವಂತಿಕೆಯನ್ನು ಪ್ರಜೆಗಳು ಬೆಳೆಸಿಕೊಂಡಾಗ ಮಾತ್ರ ಸಂವಿಧಾನದ ಆಶಯಗಳು ಸಾಕಾರಗೊಳ್ಳಲು ಸಾಧ್ಯ ಎಂದು ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಾಸು ಮೊಗೇರ್ ಹೇಳಿದರು.</p>.<p>ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂ ಎಸಿ, ರಾಜಕೀಯ ಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಜಂಟಿ ಆಶ್ರಯದಲ್ಲಿ ಈಚೆಗೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಮಾತನಾಡಿ, ಸಂವಿಧಾನ ಸಾರುವ ಮೌಲ್ಯಗಳೆಲ್ಲವೂ ಮಾನವೀಯ ಮೌಲ್ಯಗಳಾಗಿರುವುದರಿಂದ ಅದು ನಮ್ಮ ಬದುಕಿನ ಮೌಲ್ಯಗಳು, ಅದನ್ನು ಗೌರವಿಸುವುದು ನಮ್ಮ ಜವಾಬ್ದಾರಿ ಎಂದರು.<br><br>ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್ ನೀಲಾವರ ಮಾತನಾಡಿದರು.</p>.<p>ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಜ್ ಕುಮಾರ್, ಸಂದೇಶ್, ಐಕ್ಯೂಎಸಿ ಸಂಚಾಲಕ ವಿಷ್ಣುಮೂರ್ತಿ ಪ್ರಭು, ರಾಜ್ಯಶಾಸ್ತ್ರ ಉಪನ್ಯಾಸಕ ಆರತಿ ಜಿ., ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗುವ ಅಪಾಯಗಳನ್ನು ಎದುರಿಸುವ ಪ್ರಜ್ಞಾವಂತಿಕೆಯನ್ನು ಪ್ರಜೆಗಳು ಬೆಳೆಸಿಕೊಂಡಾಗ ಮಾತ್ರ ಸಂವಿಧಾನದ ಆಶಯಗಳು ಸಾಕಾರಗೊಳ್ಳಲು ಸಾಧ್ಯ ಎಂದು ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಾಸು ಮೊಗೇರ್ ಹೇಳಿದರು.</p>.<p>ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂ ಎಸಿ, ರಾಜಕೀಯ ಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಜಂಟಿ ಆಶ್ರಯದಲ್ಲಿ ಈಚೆಗೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತೆಂಕನಿಡಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬ ಮಾತನಾಡಿ, ಸಂವಿಧಾನ ಸಾರುವ ಮೌಲ್ಯಗಳೆಲ್ಲವೂ ಮಾನವೀಯ ಮೌಲ್ಯಗಳಾಗಿರುವುದರಿಂದ ಅದು ನಮ್ಮ ಬದುಕಿನ ಮೌಲ್ಯಗಳು, ಅದನ್ನು ಗೌರವಿಸುವುದು ನಮ್ಮ ಜವಾಬ್ದಾರಿ ಎಂದರು.<br><br>ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಶಾಂತ್ ನೀಲಾವರ ಮಾತನಾಡಿದರು.</p>.<p>ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಜ್ ಕುಮಾರ್, ಸಂದೇಶ್, ಐಕ್ಯೂಎಸಿ ಸಂಚಾಲಕ ವಿಷ್ಣುಮೂರ್ತಿ ಪ್ರಭು, ರಾಜ್ಯಶಾಸ್ತ್ರ ಉಪನ್ಯಾಸಕ ಆರತಿ ಜಿ., ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>