ಉಡುಪಿ: ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಸಚಿವ ಈಶ್ವರಪ್ಪ, ಬಸವರಾಜ್, ರಮೇಶ್ ಬಂಧನವಾಗುವವರೆಗೂ ಶವ ಕೊಂಡೊಯ್ಯುವುದಿಲ್ಲ, ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟುಹಿಡಿದಿದ್ದ ಕುಟುಂಬಸ್ಥರ ಮನವೊಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಎಫ್ಐಆರ್ ದಾಖಲಾಗಿ, ಪಂಚನಾಮೆ ಪೂರ್ಣಗೊಂಡು ಹಲವು ತಾಸು ಕಳೆದರೂ ಕುಟುಂಬಸ್ಥರು ಶವ ಪರೀಕ್ಷೆಗೆ ಅನುಮತಿ ನೀಡಿರಲಿಲ್ಲ. ಕೊನೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮನವೊಲಿಸಿದ ಬಳಿಕ ಶವವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಯಿತು.