<p><strong>ಉಡುಪಿ:</strong> ಸಮುದ್ರದಲ್ಲಿ ಅನಧಿಕೃತ ಹಾಗೂ ನಿಷೇಧಿತ ಮೀನುಗಾರಿಕಾ ಚಟುವಟಿಕೆಗಳನ್ನು ನಡೆಸದಂತೆ ಎಚ್ಚರವಹಿಸಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಗುರುವಾರ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಂಭಾಂಗಣದಲ್ಲಿ ನಡೆದ ಪಶುಪಾಲನೆ ಮತ್ತು ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬಂದರುಗಳಲ್ಲಿ ಮೀನುಗಾರರು ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ಕ್ರಮ ತೆಗೆದುಕೊಳ್ಳಬೇಕು. ಸಮುದ್ರದಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಿ ಚಿಕಿತ್ಸೆ ನೀಡಲು ಅನುಕೂಲವಾಗಲು ಸಿ-ಆಂಬುಲೆನ್ಸ್ ಬೋಟ್ಗಳನ್ನು ಶೀಘ್ರ ಕಡಲಿನಲ್ಲಿ ನಿಯೋಜಿಸಲಾಗುವುದು ಎಂದರು.</p>.<p>ಬಂದರುಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪ್ರತಿದಿನ ಮಲ್ಪೆ ಬಂದರಿಗೆ 8 ರಿಂದ 10 ಸಾವಿರ ಜನ ಬಂದು ಹೋಗುತ್ತಿದ್ದಾರೆ. ಸ್ಥಳೀಯರು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದು ಹೋಗುವವರ ಸಂಖ್ಯೆ ಹೆಚ್ಚಿದ್ದು, ಮೀನುಗಾರಿಕಾ ಚಟುವಟಿಕೆಗಳಲ್ಲಿ ಭಾಗವಹಿಸುವವರು ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಕರಾವಳಿ ಕಾವಲುಪಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲೆಯಲ್ಲಿ ನೋಂದಣಿಯಾಗದಿರುವ ಪಾತಿ ದೋಣಿಗಳನ್ನು ಮೂರು ತಿಂಗಳೊಳಗೆ ನೋಂದಣಿ ಮಾಡಿಕೊಳ್ಳಬೇಕು. ಮೀನುಗಾರಿಕೆಗೆ ತೆರಳಿರುವ ಬೋಟ್ಗಳು ಸರ್ಕಾರದ ಸೂಚನೆಯನ್ವಯ ನಿಗದಿಪಡಿಸಿರುವ ಕಲರ್ ಕೋಡಿಂಗ್ಗಳನ್ನು ತಪ್ಪದೆ ಪಾಲಿಸಬೇಕು ಎಂದರು.</p>.<p>ಹೊರ ಜಿಲ್ಲೆಗಳಿಂದ ಅನಧಿಕೃತವಾಗಿ ಮೀನುಗಾರಿಕೆ ನಡೆಸುವ ದೋಣಿಗಳಿಗೆ ದಂಡ ವಿಧಿಸಬೇಕು. ದೋಣಿಗಳಿಗೆ ಚೀನಾ ನಿರ್ಮಿತ ಟ್ರೇಸಿಂಗ್ ಡಿವೈಸ್ಗಳನ್ನು ಅಳವಡಿಸಲಾಗಿದ್ದು, ಬಂದರು ಕಡೆ ದೋಣಿಗಳು ಬರುವಾಗ ಗುರುತಿಸಲು ಗೊಂದಲಗಳು ಉಂಟಾಗುತ್ತಿವೆ. ಅಂತಹ ಸಾಧನಗಳ ತಾಂತ್ರಿಕ ಸಮಸ್ಯೆ ಸರಿಪಡಿಸಬೇಕು ಎಂದರು.</p>.<p>ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ತೆರೆಯಲು ಸ್ಥಳ ಗುರುತಿಸಬೇಕು. ಸುಸಜ್ಜಿತ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ. ನವೀನ್ ಭಟ್ ವೈ, ಎಸ್ಪಿ ಎನ್. ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಘಟಕದ ಎಸ್ಪಿ ಆರ್. ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸಮುದ್ರದಲ್ಲಿ ಅನಧಿಕೃತ ಹಾಗೂ ನಿಷೇಧಿತ ಮೀನುಗಾರಿಕಾ ಚಟುವಟಿಕೆಗಳನ್ನು ನಡೆಸದಂತೆ ಎಚ್ಚರವಹಿಸಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಗುರುವಾರ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಂಭಾಂಗಣದಲ್ಲಿ ನಡೆದ ಪಶುಪಾಲನೆ ಮತ್ತು ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಬಂದರುಗಳಲ್ಲಿ ಮೀನುಗಾರರು ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ಕ್ರಮ ತೆಗೆದುಕೊಳ್ಳಬೇಕು. ಸಮುದ್ರದಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಿ ಚಿಕಿತ್ಸೆ ನೀಡಲು ಅನುಕೂಲವಾಗಲು ಸಿ-ಆಂಬುಲೆನ್ಸ್ ಬೋಟ್ಗಳನ್ನು ಶೀಘ್ರ ಕಡಲಿನಲ್ಲಿ ನಿಯೋಜಿಸಲಾಗುವುದು ಎಂದರು.</p>.<p>ಬಂದರುಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪ್ರತಿದಿನ ಮಲ್ಪೆ ಬಂದರಿಗೆ 8 ರಿಂದ 10 ಸಾವಿರ ಜನ ಬಂದು ಹೋಗುತ್ತಿದ್ದಾರೆ. ಸ್ಥಳೀಯರು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದು ಹೋಗುವವರ ಸಂಖ್ಯೆ ಹೆಚ್ಚಿದ್ದು, ಮೀನುಗಾರಿಕಾ ಚಟುವಟಿಕೆಗಳಲ್ಲಿ ಭಾಗವಹಿಸುವವರು ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಕರಾವಳಿ ಕಾವಲುಪಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲೆಯಲ್ಲಿ ನೋಂದಣಿಯಾಗದಿರುವ ಪಾತಿ ದೋಣಿಗಳನ್ನು ಮೂರು ತಿಂಗಳೊಳಗೆ ನೋಂದಣಿ ಮಾಡಿಕೊಳ್ಳಬೇಕು. ಮೀನುಗಾರಿಕೆಗೆ ತೆರಳಿರುವ ಬೋಟ್ಗಳು ಸರ್ಕಾರದ ಸೂಚನೆಯನ್ವಯ ನಿಗದಿಪಡಿಸಿರುವ ಕಲರ್ ಕೋಡಿಂಗ್ಗಳನ್ನು ತಪ್ಪದೆ ಪಾಲಿಸಬೇಕು ಎಂದರು.</p>.<p>ಹೊರ ಜಿಲ್ಲೆಗಳಿಂದ ಅನಧಿಕೃತವಾಗಿ ಮೀನುಗಾರಿಕೆ ನಡೆಸುವ ದೋಣಿಗಳಿಗೆ ದಂಡ ವಿಧಿಸಬೇಕು. ದೋಣಿಗಳಿಗೆ ಚೀನಾ ನಿರ್ಮಿತ ಟ್ರೇಸಿಂಗ್ ಡಿವೈಸ್ಗಳನ್ನು ಅಳವಡಿಸಲಾಗಿದ್ದು, ಬಂದರು ಕಡೆ ದೋಣಿಗಳು ಬರುವಾಗ ಗುರುತಿಸಲು ಗೊಂದಲಗಳು ಉಂಟಾಗುತ್ತಿವೆ. ಅಂತಹ ಸಾಧನಗಳ ತಾಂತ್ರಿಕ ಸಮಸ್ಯೆ ಸರಿಪಡಿಸಬೇಕು ಎಂದರು.</p>.<p>ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಗೋಶಾಲೆಗಳನ್ನು ತೆರೆಯಲು ಸ್ಥಳ ಗುರುತಿಸಬೇಕು. ಸುಸಜ್ಜಿತ ಗೋಶಾಲೆಗಳನ್ನು ಆರಂಭಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ. ನವೀನ್ ಭಟ್ ವೈ, ಎಸ್ಪಿ ಎನ್. ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಘಟಕದ ಎಸ್ಪಿ ಆರ್. ಚೇತನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>