<p><strong>ಕುಂದಾಪುರ:</strong> ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರು ಸಹಕಾರಿ ವ್ಯವಸಾಯಿಕ ಸಂಘದಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿ ಸದಾಶಿವ ವೈದ್ಯ ಎಂಬಾತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.</p>.<p>2023–24ನೇ ಸಾಲಿನಲ್ಲಿ ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಆರೋಪಿ ಸದಾಶಿವ ವೈದ್ಯ, ಅಧಿಕಾರ ದುರುಪಯೋಗಪಡಿಸಿಕೊಂಡು ಸಂಘದ ಹಣವನ್ನು ಅಕ್ರಮವಾಗಿ ಬಳಕೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.</p>.<p>ಆರೋಪಿಯು ಬಡ್ಡಿ ಖಾತೆಗಳಿಗೆ ನಕಲಿ ಖರ್ಚು ದಾಖಲಿಸಿ, ನಕಲಿ ಠೇವಣಿ ಖಾತೆಗಳನ್ನು ಸೃಷ್ಟಿಸಿ, ಉಳಿತಾಯ ಖಾತೆಗಳಲ್ಲಿ ಅವ್ಯವಹಾರ ನಡೆಸಿ ಒಟ್ಟು ₹3.95 ಕೋಟಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾನೆ. ನಕಲಿ ಠೇವಣಿ, ಉಳಿತಾಯ, ಸಾಲ ಖಾತೆಗಳನ್ನು ತನ್ನ ಸಂಬಂಧಿಕರಿಗೆ ಸೇರಿದ ಖಾತೆಗಳ ಮೂಲಕ ತೆರೆದು ಸಂಘದ ಹಣ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p>ಸಂಸ್ಥೆಯ ನಿರ್ದಿಷ್ಟ ಠೇವಣಿ ಕುಳುವಾರು ಪರಿಶೀಲನೆ ವೇಳೆ ಈ ಅಕ್ರಮಗಳು ಪತ್ತೆಯಾಗಿದ್ದು, ಸಂಘದ ಪ್ರಸ್ತುತ ಪ್ರಭಾರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರವೀಣ ಕುಮಾರ್ ಶೆಟ್ಟಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ:</strong> ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರು ಸಹಕಾರಿ ವ್ಯವಸಾಯಿಕ ಸಂಘದಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿ ಸದಾಶಿವ ವೈದ್ಯ ಎಂಬಾತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.</p>.<p>2023–24ನೇ ಸಾಲಿನಲ್ಲಿ ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಆರೋಪಿ ಸದಾಶಿವ ವೈದ್ಯ, ಅಧಿಕಾರ ದುರುಪಯೋಗಪಡಿಸಿಕೊಂಡು ಸಂಘದ ಹಣವನ್ನು ಅಕ್ರಮವಾಗಿ ಬಳಕೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.</p>.<p>ಆರೋಪಿಯು ಬಡ್ಡಿ ಖಾತೆಗಳಿಗೆ ನಕಲಿ ಖರ್ಚು ದಾಖಲಿಸಿ, ನಕಲಿ ಠೇವಣಿ ಖಾತೆಗಳನ್ನು ಸೃಷ್ಟಿಸಿ, ಉಳಿತಾಯ ಖಾತೆಗಳಲ್ಲಿ ಅವ್ಯವಹಾರ ನಡೆಸಿ ಒಟ್ಟು ₹3.95 ಕೋಟಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದಾನೆ. ನಕಲಿ ಠೇವಣಿ, ಉಳಿತಾಯ, ಸಾಲ ಖಾತೆಗಳನ್ನು ತನ್ನ ಸಂಬಂಧಿಕರಿಗೆ ಸೇರಿದ ಖಾತೆಗಳ ಮೂಲಕ ತೆರೆದು ಸಂಘದ ಹಣ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p>ಸಂಸ್ಥೆಯ ನಿರ್ದಿಷ್ಟ ಠೇವಣಿ ಕುಳುವಾರು ಪರಿಶೀಲನೆ ವೇಳೆ ಈ ಅಕ್ರಮಗಳು ಪತ್ತೆಯಾಗಿದ್ದು, ಸಂಘದ ಪ್ರಸ್ತುತ ಪ್ರಭಾರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರವೀಣ ಕುಮಾರ್ ಶೆಟ್ಟಿ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>