19ರಂದು ಪಡುಬಿದ್ರಿ ಸೊಸೈಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಳೇ ವಿದ್ಯಾರ್ಥಿ ಸಂಘ, ಗಣಪತಿ ಪ್ರೌಢಶಾಲೆ ಆಶ್ರಯದಲ್ಲಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿದ ಶೀತಲೀಕೃತ ಶವಾಗಾರದ ಉದ್ಘಾಟನೆ, ವೈದ್ಯಕೀಯ ಶಿಬಿರ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸುವರು. ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಡಾ. ನಾಗಭೂಷಣ ಉಡುಪ, ತಾಲ್ಲೂಕು ವೈದ್ಯಾಧಿಕಾರಿ ಡಾ. ವಾಸುದೇವ್ ಉಪಾಧ್ಯಾಯ ಮತ್ತಿತರರು ಭಾಗವಹಿಸಲಿದ್ದಾರೆ. 20ರಂದು ಸಹಕಾರ ಸಪ್ತಾಹದ ಸಮಾರೋಪದ ಕಾರ್ಯಕ್ರಮವು ನಡೆಯಲಿದೆ ಎಂದು ವಿವರಿಸಿದರು.