ಬುಡಕಟ್ಟು ಸಮುದಾಯದವರೇ ಹೆಚ್ಚಾಗಿ ವಾಸವಾಗಿರುವ ಈ ಪ್ರದೇಶಕ್ಕೆ ಇರುವ ಪ್ರಮುಖ ಸಂಪರ್ಕ ರಸ್ತೆಯೇ ಕೊಚ್ಚಿ ಹೋಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಪ್ರಭಾವಿ ರಾಜಕಾರಣಿಯೊಬ್ಬರ ಸಹೋದರ ಈ ಕಾಮಗಾರಿಯ ಗುತ್ತಿಗೆದಾರರಾಗಿದ್ದು, ಗುಣಮಟ್ಟಕ್ಕೆ ಆದ್ಯತೆ ನೀಡಿಲ್ಲ ಎನ್ನುವುದು ಸ್ಥಳೀಯರು ಆರೋಪಿಸಿದ್ದಾರೆ. ರಸ್ತೆ ಶೀಘ್ರ ದುರಸ್ತಿ ಮಾಡಬೇಕು ಎಂಬುದು ಗ್ರಾಮಸ್ಥರ ಆಗ್ರಹ.