ಪ್ರಾಚ್ಯ ವೃಕ್ಷಗಳಲ್ಲಿ ಒಂದಾಗಿರುವ ಶ್ರೀತಾಳೆ, ವಿಶೇಷವಾಗಿ ನಮ್ಮ ಪೂರ್ವಜರಿಗೆ ನಾನಾ ರೀತಿಯಲ್ಲಿ ಆಶ್ರಯ ನೀಡಿದೆ. ಪರ್ಣಕುಟೀರವಾಗಿ, ಮಳೆಗಾಳಿಗೆ ತತ್ರವಾಗಿ, ಕೃಷಿ ಕೆಲಸ ನಡೆಸಲು ಗೊರಂಬಾಗಿ ರಕ್ಷಣೆ ನೀಡಿದೆ. ಅಲ್ಲದೆ, ಇದರ ಗರಿಗಳನ್ನು ಗ್ರಂಥ, ಸಾಹಿತ್ಯಗಳನ್ನು ಬರೆಯಲು ಉಪಯೋಗಿಸಲಾಗುತ್ತಿತ್ತು. ಆದರೆ ಇಂದು ಹಸಿರು, ಹಸಿವು ಮತ್ತು ಅಕ್ಷರ ಪ್ರಪಂಚದ ಪ್ರತೀಕವಾದ ಈ ವೃಕ್ಷ ವಿಶ್ವದ ಹಸಿರು ಪಟ್ಟಿಯಿಂದ ಜಾರಿ ಕೆಂಪು ಪಟ್ಟಿಗೆ ಸೇರಿಕೊಂಡಿದೆ.