<p><strong>ಉಡುಪಿ</strong>: ತಂದೆಗೆ ದೈಹಿಕ, ಮಾನಸಿಕ ಕಿರುಕುಳ ನೀಡದಂತೆ ಹಾಗೂ ಅವರ ಮನೆಯಲ್ಲಿ ವಾಸಿಸಲು ಅನುವು ಮಾಡಿಕೊಂಡುವಂತೆ ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಚೈತ್ರಾ ಕುಂದಾಪುರ ಅವರಿಗೆ ನಿರ್ದೇಶಿಸಿದೆ.</p><p>ಚೈತ್ರಾ ತಂದೆ 71 ವರ್ಷದ ಬಾಲಕೃಷ್ಣ ನಾಯ್ಕ ಅವರು, ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ 2007ರ ಅಡಿ ಪರಿಹಾರ ಕೋರಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.</p><p>ದೂರು ಪುರಸ್ಕರಿಸಿ ವಾದ ಪ್ರತಿವಾದ ಆಲಿಸಿದ ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಅವರು ಈ ಆದೇಶ ನೀಡಿದ್ದಾರೆ.</p><p>ಬಾಲಕೃಷ್ಣ ನಾಯ್ಕ ಅವರ ಜೀವ ಮತ್ತು ಸೊತ್ತಿಗೆ ರಕ್ಷಣೆ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ಗೆ ಕೋರ್ಟ್ ಸೂಚನೆ ನೀಡಿದೆ.</p><p>ಪತ್ನಿ ಹಾಗೂ ಮಗಳು ಚೈತ್ರಾ ಸೇರಿಕೊಂಡು ಮನೆಯ ದಾಖಲೆಗಳನ್ನು ಅವರ ಹೆಸರಿಗೆ ವರ್ಗಾಯಿಸುವಂತೆ ಒತ್ತಡ ಹೇರಿದ್ದು, ಅದನ್ನು ನಿರಾಕರಿಸಿದ ಕಾರಣ ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಬಾಲಕೃಷ್ಣ ನಾಯ್ಕ ಅವರು ತಿಳಿಸಿದ್ದರು.</p><p>ಈ ಕಾರಣಕ್ಕೆ ಮಂಗಳೂರಿನ ಹೊಟೇಲ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದು, ಹಿರಿಯ ಮಗಳನ್ನು ಭೇಟಿಯಾಗಲು ಆಗಾಗ ಊರಿಗೆ ಬರುತ್ತಿದ್ದೆ. ಸದ್ಯ ಚೈತ್ರಾ ಹಾಗೂ ಆಕೆಯ ತಾಯಿ ಸ್ವಂತ ಮನೆಗೆ ಪ್ರವೇಶಿಸಲು ಬಿಡದೆ, ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಅವರು ದೂರಿನಲ್ಲಿ ಹೇಳಿದ್ದರು.</p><p>ಬಾಲಕೃಷ್ಣ ನಾಯ್ಕ ಅವರ ಪರ ವಕೀಲ ಕೆ.ಸಿ. ಶೆಟ್ಟಿ ಕುಂದಾಪುರ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ತಂದೆಗೆ ದೈಹಿಕ, ಮಾನಸಿಕ ಕಿರುಕುಳ ನೀಡದಂತೆ ಹಾಗೂ ಅವರ ಮನೆಯಲ್ಲಿ ವಾಸಿಸಲು ಅನುವು ಮಾಡಿಕೊಂಡುವಂತೆ ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಚೈತ್ರಾ ಕುಂದಾಪುರ ಅವರಿಗೆ ನಿರ್ದೇಶಿಸಿದೆ.</p><p>ಚೈತ್ರಾ ತಂದೆ 71 ವರ್ಷದ ಬಾಲಕೃಷ್ಣ ನಾಯ್ಕ ಅವರು, ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ 2007ರ ಅಡಿ ಪರಿಹಾರ ಕೋರಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು.</p><p>ದೂರು ಪುರಸ್ಕರಿಸಿ ವಾದ ಪ್ರತಿವಾದ ಆಲಿಸಿದ ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಅವರು ಈ ಆದೇಶ ನೀಡಿದ್ದಾರೆ.</p><p>ಬಾಲಕೃಷ್ಣ ನಾಯ್ಕ ಅವರ ಜೀವ ಮತ್ತು ಸೊತ್ತಿಗೆ ರಕ್ಷಣೆ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ಗೆ ಕೋರ್ಟ್ ಸೂಚನೆ ನೀಡಿದೆ.</p><p>ಪತ್ನಿ ಹಾಗೂ ಮಗಳು ಚೈತ್ರಾ ಸೇರಿಕೊಂಡು ಮನೆಯ ದಾಖಲೆಗಳನ್ನು ಅವರ ಹೆಸರಿಗೆ ವರ್ಗಾಯಿಸುವಂತೆ ಒತ್ತಡ ಹೇರಿದ್ದು, ಅದನ್ನು ನಿರಾಕರಿಸಿದ ಕಾರಣ ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಬಾಲಕೃಷ್ಣ ನಾಯ್ಕ ಅವರು ತಿಳಿಸಿದ್ದರು.</p><p>ಈ ಕಾರಣಕ್ಕೆ ಮಂಗಳೂರಿನ ಹೊಟೇಲ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದು, ಹಿರಿಯ ಮಗಳನ್ನು ಭೇಟಿಯಾಗಲು ಆಗಾಗ ಊರಿಗೆ ಬರುತ್ತಿದ್ದೆ. ಸದ್ಯ ಚೈತ್ರಾ ಹಾಗೂ ಆಕೆಯ ತಾಯಿ ಸ್ವಂತ ಮನೆಗೆ ಪ್ರವೇಶಿಸಲು ಬಿಡದೆ, ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಅವರು ದೂರಿನಲ್ಲಿ ಹೇಳಿದ್ದರು.</p><p>ಬಾಲಕೃಷ್ಣ ನಾಯ್ಕ ಅವರ ಪರ ವಕೀಲ ಕೆ.ಸಿ. ಶೆಟ್ಟಿ ಕುಂದಾಪುರ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>