<p><strong>ಉಡುಪಿ</strong>: ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಜಿಲ್ಲೆಯಲ್ಲಿ ಕಠಿಣ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಉಳಿದ ಸಮಯದಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಸರ್ಕಾರದ ಮಾರ್ಗಸೂಚಿ ಬದಲಾವಣೆಯಾಗಿದ್ದು, ಸಾರ್ವಜನಿಕರ ಸಂಚಾರ ನಿರ್ಬಂಧಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಮನೆಯ ಸಮೀಪದ ಅಂಗಡಿಗಳಿಂದ ಖರೀದಿಸಬೇಕು. ಅನಗತ್ಯವಾಗಿ ರಸ್ತೆಗಳಲ್ಲಿ ಅಡ್ಡಾಡಬಾರದು. ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಹೊರತುಪಡಿಸಿ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ ಎಂದರು.</p>.<p><strong>ಪಾರ್ಸೆಲ್ಗೆ ಅವಕಾಶವಿದೆ:</strong>ಕರ್ಫ್ಯೂ ಅವಧಿಯಲ್ಲಿ ಹೋಟೆಲ್ಗಳಲ್ಲಿ ಪಾರ್ಸೆಲ್ ಕೊಂಡೊಯ್ಯಲು ಮಾತ್ರ ಅವಕಾಶವಿದೆ. ವಸತಿ ನಿಲಯಗಳಲ್ಲಿ ಉಳಿದುಕೊಂಡವರು, ಅಡುಗೆ ಮಾಡಿಕೊಳ್ಳಲು ವ್ಯವಸ್ಥೆ ಇಲ್ಲದವರು ಆಹಾರ ಕೊಂಡೊಯ್ಯಬಹುದು. ಆನ್ಲೈನ್ನಲ್ಲಿಯೂ ಆಹಾರ ತರಿಸಿಕೊಳ್ಳಬಹುದು ಎಂದರು.</p>.<p>ದೂರದ ನಗರಗಳಿಗೆ ಸಂಚರಿಸುವ ಬಸ್ಗಳು ಮಾತ್ರ ಇರಲಿವೆ. ಆಟೋ, ಟ್ಯಾಕ್ಸಿಗಳ ಸಂಚಾರ ಇರುವುದಿಲ್ಲ. ಯಾರಿಗೂ ಬಸ್ಗಳನ್ನು ಓಡಿಸುವಂತೆ ಒತ್ತಡ ಹಾಕುವುದಿಲ್ಲ. ಒಟ್ಟಾರೆ ನಾಗರಿಕರ ಸಂಚಾರಕ್ಕೆ ನಿರ್ಬಂಧ ಹಾಕುವುದು ವೀಕೆಂಡ್ ಕರ್ಫ್ಯೂ ಆಶಯ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಜಿಲ್ಲೆಯಲ್ಲಿ ಕಠಿಣ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಬೆಳಿಗ್ಗೆ 6ರಿಂದ 10ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಉಳಿದ ಸಮಯದಲ್ಲಿ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.</p>.<p>ಸರ್ಕಾರದ ಮಾರ್ಗಸೂಚಿ ಬದಲಾವಣೆಯಾಗಿದ್ದು, ಸಾರ್ವಜನಿಕರ ಸಂಚಾರ ನಿರ್ಬಂಧಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಮನೆಯ ಸಮೀಪದ ಅಂಗಡಿಗಳಿಂದ ಖರೀದಿಸಬೇಕು. ಅನಗತ್ಯವಾಗಿ ರಸ್ತೆಗಳಲ್ಲಿ ಅಡ್ಡಾಡಬಾರದು. ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಹೊರತುಪಡಿಸಿ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ ಎಂದರು.</p>.<p><strong>ಪಾರ್ಸೆಲ್ಗೆ ಅವಕಾಶವಿದೆ:</strong>ಕರ್ಫ್ಯೂ ಅವಧಿಯಲ್ಲಿ ಹೋಟೆಲ್ಗಳಲ್ಲಿ ಪಾರ್ಸೆಲ್ ಕೊಂಡೊಯ್ಯಲು ಮಾತ್ರ ಅವಕಾಶವಿದೆ. ವಸತಿ ನಿಲಯಗಳಲ್ಲಿ ಉಳಿದುಕೊಂಡವರು, ಅಡುಗೆ ಮಾಡಿಕೊಳ್ಳಲು ವ್ಯವಸ್ಥೆ ಇಲ್ಲದವರು ಆಹಾರ ಕೊಂಡೊಯ್ಯಬಹುದು. ಆನ್ಲೈನ್ನಲ್ಲಿಯೂ ಆಹಾರ ತರಿಸಿಕೊಳ್ಳಬಹುದು ಎಂದರು.</p>.<p>ದೂರದ ನಗರಗಳಿಗೆ ಸಂಚರಿಸುವ ಬಸ್ಗಳು ಮಾತ್ರ ಇರಲಿವೆ. ಆಟೋ, ಟ್ಯಾಕ್ಸಿಗಳ ಸಂಚಾರ ಇರುವುದಿಲ್ಲ. ಯಾರಿಗೂ ಬಸ್ಗಳನ್ನು ಓಡಿಸುವಂತೆ ಒತ್ತಡ ಹಾಕುವುದಿಲ್ಲ. ಒಟ್ಟಾರೆ ನಾಗರಿಕರ ಸಂಚಾರಕ್ಕೆ ನಿರ್ಬಂಧ ಹಾಕುವುದು ವೀಕೆಂಡ್ ಕರ್ಫ್ಯೂ ಆಶಯ ಎಂದು ಜಿಲ್ಲಾಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>