ಸರ್ಕಾರದ ಮಾರ್ಗಸೂಚಿ ಬದಲಾವಣೆಯಾಗಿದ್ದು, ಸಾರ್ವಜನಿಕರ ಸಂಚಾರ ನಿರ್ಬಂಧಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಮನೆಯ ಸಮೀಪದ ಅಂಗಡಿಗಳಿಂದ ಖರೀದಿಸಬೇಕು. ಅನಗತ್ಯವಾಗಿ ರಸ್ತೆಗಳಲ್ಲಿ ಅಡ್ಡಾಡಬಾರದು. ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಹೊರತುಪಡಿಸಿ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿವೆ ಎಂದರು.