ಕೊರೊನಾ ತಡೆಗೆ ರಾಜ್ಯವೇ ಲಾಕ್ಡೌನ್ ಆಗಿದ್ದು, ವಾಣಿಜ್ಯ ಚಟುವಟಿಕೆಗಳು ಸ್ತಬ್ಧಗೊಂಡಿವೆ. ಇಂತಹ ಸಂದರ್ಭದಲ್ಲಿ ಬಾಡಿಗೆದಾರರರಿಂದ ಹಣ ಪಡೆಯುವುದು ಸರಿಯಲ್ಲ. ಮಾನವೀಯತೆ ದೃಷ್ಟಿಯಿಂದ ಮಾರ್ಚ್ 20ರಿಂದ ಏ.20ರವರೆಗೆ ಬಾಡಿಗೆ ಮನ್ನಾ ಮಾಡಲು ನಿರ್ಧರಿಸಿದ್ದೇನೆ ಎಂದು ಉದ್ಯಮಿ ಕಿಶನ್ ಹೆಗ್ಡೆ ಕೊಳ್ಕೆಬೈಲು ‘ಪ್ರಜಾವಾಣಿ’ಗೆ ತಿಳಿಸಿದರು.