<p><strong>ಉಡುಪಿ:</strong> ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ವೇಗವಾಗಿ ಹರಡುತ್ತಿದ್ದು, ಮುಂದಿನ ದಿನಗಳು ಆತಂಕದಿಂದ ಕೂಡಿರಲಿವೆ. ಸಾರ್ವಜನಿಕರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರದೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.</p>.<p>ಹೆಚ್ಚು ಜನರು ಸೇರುವ ಸಾಮೂಹಿಕ ಸಮಾರಂಭಗಳಲ್ಲಿ ಸಾರ್ವಜನಿಕರು ಭಾಗವಹಿಸಬಾರದು. ಹೋಗಲೇಬೇಕಾದ ಅನಿವಾರ್ಯತೆ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡಬೇಕು. ಹೆಚ್ಚು ಜನರು ಸೇರುವ ಸಮಾರಂಭಗಳನ್ನು ಈಗ ಆಯೋಜಿಸುವುದು ಒಳಿತಲ್ಲ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.</p>.<p>ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಕುಟುಂಬದ ಸದಸ್ಯರು ಹಿರಿಯರನ್ನು ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸಿಕೊಂಡರೆ ಕೊರೊನಾ ಆತಂಕ ಕಡಿಮೆಯಾಗಲಿದೆ. ಹಿರಿಯ ಜೀವಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.</p>.<p>ಯುವಕರು ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡಿ ಮನೆಗೆ ಹೋಗಿ ಹಿರಿಯರಿಗೆ ಸೋಂಕು ತಗುಲಿಸಿದರೆ, ಸಾವಿನ ಪ್ರಮಾಣ ಹೆಚ್ಚಾಗಲಿವೆ. ಹಿರಿಯರನ್ನು ರಕ್ಷಿಸಬೇಕಾದ ಜವಾಬ್ದಾರಿ ಕಿರಿಯರದ್ದು ಎಂದು ಡಿಸಿ ಜಿ.ಜಗದೀಶ್ ಕಿವಿಮಾತು ಹೇಳಿದ್ದಾರೆ.</p>.<p>ಜಿಲ್ಲೆಯಲ್ಲಿ 192 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಹಿರಿಯರಾಗಿದ್ದಾರೆ. ಈ ಬಾರಿ ಮತ್ತೆ ಹಿರಿಯ ಜೀವಗಳನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಾರದಿರಲಿ.</p>.<p>ಸೋಂಕು ನಿರ್ಲಕ್ಷ್ಯದ ಪರಿಣಾಮ ಕಳೆದ ವರ್ಷ ಜಿಲ್ಲೆಯಲ್ಲಿ ಐಸಿಯು ಬೆಡ್ ಹಾಗೂ ವೆಂಟಿಲೇಟರ್ಗಳ ಅಭಾವ ಎದುರಿಸಬೇಕಾಯಿತು. ಈ ಬಾರಿ ಸಾರ್ವಜನಿಕರು ಮತ್ತೆ ಮೈರೆತರೆ ಕಳೆದ ಬಾರಿಯ ಆಪತ್ತು ಎದುರಾಗಲಿದೆ. ಎಲ್ಲರೂ ಎಚ್ಚರದಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಕಿವಿಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ವೇಗವಾಗಿ ಹರಡುತ್ತಿದ್ದು, ಮುಂದಿನ ದಿನಗಳು ಆತಂಕದಿಂದ ಕೂಡಿರಲಿವೆ. ಸಾರ್ವಜನಿಕರು ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರದೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿದ್ದಾರೆ.</p>.<p>ಹೆಚ್ಚು ಜನರು ಸೇರುವ ಸಾಮೂಹಿಕ ಸಮಾರಂಭಗಳಲ್ಲಿ ಸಾರ್ವಜನಿಕರು ಭಾಗವಹಿಸಬಾರದು. ಹೋಗಲೇಬೇಕಾದ ಅನಿವಾರ್ಯತೆ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡಬೇಕು. ಹೆಚ್ಚು ಜನರು ಸೇರುವ ಸಮಾರಂಭಗಳನ್ನು ಈಗ ಆಯೋಜಿಸುವುದು ಒಳಿತಲ್ಲ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.</p>.<p>ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಕುಟುಂಬದ ಸದಸ್ಯರು ಹಿರಿಯರನ್ನು ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿಸಿಕೊಂಡರೆ ಕೊರೊನಾ ಆತಂಕ ಕಡಿಮೆಯಾಗಲಿದೆ. ಹಿರಿಯ ಜೀವಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.</p>.<p>ಯುವಕರು ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಓಡಾಡಿ ಮನೆಗೆ ಹೋಗಿ ಹಿರಿಯರಿಗೆ ಸೋಂಕು ತಗುಲಿಸಿದರೆ, ಸಾವಿನ ಪ್ರಮಾಣ ಹೆಚ್ಚಾಗಲಿವೆ. ಹಿರಿಯರನ್ನು ರಕ್ಷಿಸಬೇಕಾದ ಜವಾಬ್ದಾರಿ ಕಿರಿಯರದ್ದು ಎಂದು ಡಿಸಿ ಜಿ.ಜಗದೀಶ್ ಕಿವಿಮಾತು ಹೇಳಿದ್ದಾರೆ.</p>.<p>ಜಿಲ್ಲೆಯಲ್ಲಿ 192 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಹಿರಿಯರಾಗಿದ್ದಾರೆ. ಈ ಬಾರಿ ಮತ್ತೆ ಹಿರಿಯ ಜೀವಗಳನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಾರದಿರಲಿ.</p>.<p>ಸೋಂಕು ನಿರ್ಲಕ್ಷ್ಯದ ಪರಿಣಾಮ ಕಳೆದ ವರ್ಷ ಜಿಲ್ಲೆಯಲ್ಲಿ ಐಸಿಯು ಬೆಡ್ ಹಾಗೂ ವೆಂಟಿಲೇಟರ್ಗಳ ಅಭಾವ ಎದುರಿಸಬೇಕಾಯಿತು. ಈ ಬಾರಿ ಸಾರ್ವಜನಿಕರು ಮತ್ತೆ ಮೈರೆತರೆ ಕಳೆದ ಬಾರಿಯ ಆಪತ್ತು ಎದುರಾಗಲಿದೆ. ಎಲ್ಲರೂ ಎಚ್ಚರದಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಕಿವಿಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>