ಯಕೃತ್ತು ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ ಈಚೆಗೆ ಕುಟುಂಬ ಸದಸ್ಯರೊಂದಿಗೆ ಜಿಲ್ಲೆಗೆ ಬಂದಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ. ಮರಣಾನಂತರ ವ್ಯಕ್ತಿಯ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಗಿದೆ. ಮಾರ್ಗಸೂಚಿಗಳ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.