<p><strong>ಉಡುಪಿ: </strong>ಜಿಲ್ಲೆಯಲ್ಲಿ ಭಾನುವಾರ 130 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 20,830ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,923 ಇವೆ.</p>.<p>ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 52, ಕುಂದಾಪುರದ 44, ಕಾರ್ಕಳದ 31, ಇತರೆ ಜಿಲ್ಲೆಗಳ ಮೂವರು ಇದ್ದಾರೆ. ಚಿಕಿತ್ಸೆಗೆ ಅಗತ್ಯವಿದ್ದ 33 ಮಂದಿಗೆ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರೋಗದ ಲಕ್ಷಣ ಇಲ್ಲದ 113 ಮಂದಿಗೆ ಹೋಂ ಐಸೊಲೇಷನ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಲ್ಲಿ 62 ಪುರುಷರು, 68 ಮಹಿಳೆಯರಿದ್ದು, 42 ಮಂದಿಗೆ ಸೋಂಕಿನ ಲಕ್ಷಣಗಳಿದ್ದರೆ, 88 ಜನರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ.</p>.<p>ಜಿಲ್ಲೆಯಲ್ಲಿ ಇದುವರೆಗೂ 1,57,115 ಶಂಕಿತರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, 1,36,285 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 20,830 ಜನರ ವರದಿ ಪಾಸಿಟಿವ್ ಬಂದಿದ್ದು, ಇವರಲ್ಲಿ 18,732 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.</p>.<p><strong>ಸೋಂಕು ಪ್ರಮಾಣ ಇಳಿಕೆ: </strong>ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿರುವುದು ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ತಂದಿದೆ. ಆಗಸ್ಟ್ನಲ್ಲಿ ಶೇ 30ರಷ್ಟಿದ್ದ ಪಾಸಿಟಿವ್ ದರ, ಈಗ ಶೇ 10ರ ಆಸುಪಾಸಿಗೆ ಬಂದಿದೆ. ಜತೆಗೆ, ವೆಂಟಿಲೇಟರ್ ಐಸಿಯು ಬೆಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಕುಸಿಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದ್ದು, ಸಾರ್ವಜನಿಕರು ಸ್ವಲ್ಪ ನಿರಾಳರಾಗುವಂತಾಗಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣವನ್ನು ತಗ್ಗಿಸಬೇಕು, ಹಿರಿಯ ಜೀವಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ‘ನನ್ನ ಕುಟುಂಬ, ನನ್ನ ಜವಾಬ್ದಾರಿ’ ಎಂಬ ಅಭಿಯಾನ ಆರಂಭಿಸಿದ್ದು, ಸಾರ್ವಜನಿಕರು ಕೈಜೋಡಿಸಬೇಕು. ಕುಟುಂಬದ ಹಿರಿಯರಿಗೆ ಸೋಂಕು ತಗುಲದಂತೆ ಎಚ್ಚರವಹಿಸಬೇಕು. ರೋಗದ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಜಿಲ್ಲೆಯಲ್ಲಿ ಭಾನುವಾರ 130 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 20,830ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,923 ಇವೆ.</p>.<p>ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 52, ಕುಂದಾಪುರದ 44, ಕಾರ್ಕಳದ 31, ಇತರೆ ಜಿಲ್ಲೆಗಳ ಮೂವರು ಇದ್ದಾರೆ. ಚಿಕಿತ್ಸೆಗೆ ಅಗತ್ಯವಿದ್ದ 33 ಮಂದಿಗೆ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರೋಗದ ಲಕ್ಷಣ ಇಲ್ಲದ 113 ಮಂದಿಗೆ ಹೋಂ ಐಸೊಲೇಷನ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಲ್ಲಿ 62 ಪುರುಷರು, 68 ಮಹಿಳೆಯರಿದ್ದು, 42 ಮಂದಿಗೆ ಸೋಂಕಿನ ಲಕ್ಷಣಗಳಿದ್ದರೆ, 88 ಜನರಿಗೆ ಲಕ್ಷಣಗಳು ಕಾಣಿಸಿಕೊಂಡಿಲ್ಲ.</p>.<p>ಜಿಲ್ಲೆಯಲ್ಲಿ ಇದುವರೆಗೂ 1,57,115 ಶಂಕಿತರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, 1,36,285 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 20,830 ಜನರ ವರದಿ ಪಾಸಿಟಿವ್ ಬಂದಿದ್ದು, ಇವರಲ್ಲಿ 18,732 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ.</p>.<p><strong>ಸೋಂಕು ಪ್ರಮಾಣ ಇಳಿಕೆ: </strong>ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿರುವುದು ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ತಂದಿದೆ. ಆಗಸ್ಟ್ನಲ್ಲಿ ಶೇ 30ರಷ್ಟಿದ್ದ ಪಾಸಿಟಿವ್ ದರ, ಈಗ ಶೇ 10ರ ಆಸುಪಾಸಿಗೆ ಬಂದಿದೆ. ಜತೆಗೆ, ವೆಂಟಿಲೇಟರ್ ಐಸಿಯು ಬೆಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಕುಸಿಯುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದ್ದು, ಸಾರ್ವಜನಿಕರು ಸ್ವಲ್ಪ ನಿರಾಳರಾಗುವಂತಾಗಿದೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣವನ್ನು ತಗ್ಗಿಸಬೇಕು, ಹಿರಿಯ ಜೀವಗಳನ್ನು ರಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾಡಳಿತ ‘ನನ್ನ ಕುಟುಂಬ, ನನ್ನ ಜವಾಬ್ದಾರಿ’ ಎಂಬ ಅಭಿಯಾನ ಆರಂಭಿಸಿದ್ದು, ಸಾರ್ವಜನಿಕರು ಕೈಜೋಡಿಸಬೇಕು. ಕುಟುಂಬದ ಹಿರಿಯರಿಗೆ ಸೋಂಕು ತಗುಲದಂತೆ ಎಚ್ಚರವಹಿಸಬೇಕು. ರೋಗದ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>