<p><strong>ಉಡುಪಿ: </strong>ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಂಗಳೂರಿಗೆ ಪ್ರಯಾಣ ಬೆಳೆಸಿದ 12 ಮಂದಿ ಸೇರಿ ಜಿಲ್ಲೆಯಲ್ಲಿ ಗುರುವಾರ 22 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ.</p>.<p>ಮಂಗಳೂರು ಪ್ರಯಾಣದ ಹಿನ್ನೆಲೆ ಇರುವ ನಾಲ್ವರಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣ ಸಂಪರ್ಕ ಹೊಂದಿರುವ ಮೂವರಲ್ಲಿ, ಚಿಕ್ಕಮಗಳೂರು ಸಂಪರ್ಕದಿಂದ ಒಬ್ಬರಿಗೆ, ಬೆಂಗಳೂರು ಸಂಪರ್ಕದಿಂದ ನಾಲ್ವರಿಗೆ ಸೋಂಕು ತಗುಲಿದೆ. ಮಹಾರಾಷ್ಟ್ರದಿಂದ ಬಂದ ಒಬ್ಬರಲ್ಲಿ ಕೋವಿಡ್ ಕಾಣಿಸಿಕೊಂಡಿದೆ.</p>.<p>ನೆರೆಯ ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕದಿಂದ 7 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿರುವುದು ಆತಂಕ ಸೃಷ್ಟಿಯಾಗಿದೆ. ಸಮುದಾಯಕ್ಕೆ ಸೋಂಕು ತಗುಲಿದೆಯಾ ಎಂಬ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ.</p>.<p>ಪಿ.30,779,30,780,30,783,30,787,30,796, 30,797 ಸೋಂಕಿತರಿಗೆ ಸೋಂಕು ಹೇಗೆ ತಗುಲಿದೆ ಎಂಬುದನ್ನು ಅಧಿಕಾರಿಗಳು ಪತ್ತೆ ಹೆಚ್ಚುತ್ತಿದ್ದಾರೆ. ರೋಗಿ ಸಂಖ್ಯೆ ಪಿ–4,725 ಸಂಪರ್ಕದಿಂದ ಒಬ್ಬರಿಗೆ,22,930 ವ್ಯಕ್ತಿಯಿಂದ ಇಬ್ಬರಿಗೆ ಸೋಂಕು ಹರಡಿದೆ.</p>.<p>ಸೋಂಕಿತರಲ್ಲಿ 10 ಪುರುಷರು, 10 ಮಹಿಳೆಯರು, ಇಬ್ಬರು ಮಕ್ಕಳಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಗುರುವಾರ 218 ಜನರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 2433 ವರದಿಗಳು ಬರುವುದು ಬಾಕಿ ಇದೆ. ಸೋಕಿನ ಲಕ್ಷಣಗಳು ಕಂಡುಬಂದ 16 ಪುರುಷರು ಹಾಗೂ 8 ಮಹಿಳೆಯರು ಸೇರಿ 24 ಜನರಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>28 ಮಂದಿ ಗುಣಮುಖ: </strong>ಜಿಲ್ಲೆಯಲ್ಲಿ ಗುರುವಾರ 28 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 1,217 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರ ಸಂಖ್ಯೆ 1443ಕ್ಕೇರಿಕೆಯಾಗಿದ್ದು, ಸದ್ಯ ಜಿಲ್ಲೆ 223 ಸಕ್ರಿಯ ಪ್ರಕರಣಗಳು ಇವೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಂಗಳೂರಿಗೆ ಪ್ರಯಾಣ ಬೆಳೆಸಿದ 12 ಮಂದಿ ಸೇರಿ ಜಿಲ್ಲೆಯಲ್ಲಿ ಗುರುವಾರ 22 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ.</p>.<p>ಮಂಗಳೂರು ಪ್ರಯಾಣದ ಹಿನ್ನೆಲೆ ಇರುವ ನಾಲ್ವರಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣ ಸಂಪರ್ಕ ಹೊಂದಿರುವ ಮೂವರಲ್ಲಿ, ಚಿಕ್ಕಮಗಳೂರು ಸಂಪರ್ಕದಿಂದ ಒಬ್ಬರಿಗೆ, ಬೆಂಗಳೂರು ಸಂಪರ್ಕದಿಂದ ನಾಲ್ವರಿಗೆ ಸೋಂಕು ತಗುಲಿದೆ. ಮಹಾರಾಷ್ಟ್ರದಿಂದ ಬಂದ ಒಬ್ಬರಲ್ಲಿ ಕೋವಿಡ್ ಕಾಣಿಸಿಕೊಂಡಿದೆ.</p>.<p>ನೆರೆಯ ದಕ್ಷಿಣ ಕನ್ನಡ ಜಿಲ್ಲೆಯ ಸಂಪರ್ಕದಿಂದ 7 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿರುವುದು ಆತಂಕ ಸೃಷ್ಟಿಯಾಗಿದೆ. ಸಮುದಾಯಕ್ಕೆ ಸೋಂಕು ತಗುಲಿದೆಯಾ ಎಂಬ ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ.</p>.<p>ಪಿ.30,779,30,780,30,783,30,787,30,796, 30,797 ಸೋಂಕಿತರಿಗೆ ಸೋಂಕು ಹೇಗೆ ತಗುಲಿದೆ ಎಂಬುದನ್ನು ಅಧಿಕಾರಿಗಳು ಪತ್ತೆ ಹೆಚ್ಚುತ್ತಿದ್ದಾರೆ. ರೋಗಿ ಸಂಖ್ಯೆ ಪಿ–4,725 ಸಂಪರ್ಕದಿಂದ ಒಬ್ಬರಿಗೆ,22,930 ವ್ಯಕ್ತಿಯಿಂದ ಇಬ್ಬರಿಗೆ ಸೋಂಕು ಹರಡಿದೆ.</p>.<p>ಸೋಂಕಿತರಲ್ಲಿ 10 ಪುರುಷರು, 10 ಮಹಿಳೆಯರು, ಇಬ್ಬರು ಮಕ್ಕಳಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಗುರುವಾರ 218 ಜನರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 2433 ವರದಿಗಳು ಬರುವುದು ಬಾಕಿ ಇದೆ. ಸೋಕಿನ ಲಕ್ಷಣಗಳು ಕಂಡುಬಂದ 16 ಪುರುಷರು ಹಾಗೂ 8 ಮಹಿಳೆಯರು ಸೇರಿ 24 ಜನರಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p><strong>28 ಮಂದಿ ಗುಣಮುಖ: </strong>ಜಿಲ್ಲೆಯಲ್ಲಿ ಗುರುವಾರ 28 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 1,217 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರ ಸಂಖ್ಯೆ 1443ಕ್ಕೇರಿಕೆಯಾಗಿದ್ದು, ಸದ್ಯ ಜಿಲ್ಲೆ 223 ಸಕ್ರಿಯ ಪ್ರಕರಣಗಳು ಇವೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>