<p>ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಕುಂಜಾಲು ಜಂಕ್ಷನ್ ಬಳಿ ದನದ ತಲೆ ಮತ್ತು ಚರ್ಮದ ಭಾಗಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಕುಂಜಾಲುವಿನ ರಾಮ (49), ಪ್ರಸಾದ್(21), ಸಂದೇಶ(35) ರಾಜೇಶ್ (28) ಮಟಪಾಡಿಯ ನವೀನ್(35), ಅಡ್ಜಿಲದ ಕೇಶವ ನಾಯ್ಕ್ (50) ಬಂಧಿತ ಆರೋಪಿಗಳು. ಇನ್ನೊಬ್ಬ ಅರೋಪಿ ತಲೆಮರೆಸಿಕೊಂಡಿದ್ದಾನೆ. ದನದ ಮಾಂಸ ಸಾಗಿಸಲು ಬಳಸಿದ್ದ ಆ್ಯಕ್ಟಿವಾ ಸ್ಕೂಟರ್ ಮತ್ತು ಸ್ವಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಕೇಶವ ನಾಯ್ಕ್ ಅವರಿಗೆ ದನವನ್ನು ಸಾಕಲು ಸಾಧ್ಯವಾಗದ ಕಾರಣ ಆರೋಪಿಗಳಿಗೆ ನೀಡಿದ್ದರು. ಅವರು ಮಾಂಸಕ್ಕಾಗಿ ಅದನ್ನು ಕೊಂದು ಅದರ ದೇಹದ ಭಾಗಗಳನ್ನು ಸ್ಕೂಟರ್ನಲ್ಲಿ ಸಾಗಿಸುವಾಗ ರುಂಡ ರಸ್ತೆಗೆ ಬಿದ್ದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.</p>.<p>ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲ. ತಿನ್ನುವ ಉದ್ದೇಶಕ್ಕೆ ಅವರು ಮಾಂಸ ಸಾಗಾಟ ಮಾಡಿದ್ದಾರೆ ಎಂದೂ ತಿಳಿಸಿದ್ದಾರೆ.</p>.<p>ಇಂತಹ ಪ್ರಕರಣಗಳು ನಡೆದಾಗ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಪ್ರಚೋದಿಸುವ ಪೋಸ್ಟ್ಗಳನ್ನು ಮಾಡಬಾರದು ಎಂದು ಜನರಲ್ಲಿ ಅವರು ಮನವಿ ಮಾಡಿದ್ದಾರೆ.</p>.<p>ದನದ ತಲೆ ಪತ್ತೆಯಾದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ್ದ ಶಾಸಕ ಯಶ್ಪಾಲ್ ಸುವರ್ಣ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿಭಟನಾ ಸಭೆ ನಡೆಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಕುಂಜಾಲು ಜಂಕ್ಷನ್ ಬಳಿ ದನದ ತಲೆ ಮತ್ತು ಚರ್ಮದ ಭಾಗಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಕುಂಜಾಲುವಿನ ರಾಮ (49), ಪ್ರಸಾದ್(21), ಸಂದೇಶ(35) ರಾಜೇಶ್ (28) ಮಟಪಾಡಿಯ ನವೀನ್(35), ಅಡ್ಜಿಲದ ಕೇಶವ ನಾಯ್ಕ್ (50) ಬಂಧಿತ ಆರೋಪಿಗಳು. ಇನ್ನೊಬ್ಬ ಅರೋಪಿ ತಲೆಮರೆಸಿಕೊಂಡಿದ್ದಾನೆ. ದನದ ಮಾಂಸ ಸಾಗಿಸಲು ಬಳಸಿದ್ದ ಆ್ಯಕ್ಟಿವಾ ಸ್ಕೂಟರ್ ಮತ್ತು ಸ್ವಿಫ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಕೇಶವ ನಾಯ್ಕ್ ಅವರಿಗೆ ದನವನ್ನು ಸಾಕಲು ಸಾಧ್ಯವಾಗದ ಕಾರಣ ಆರೋಪಿಗಳಿಗೆ ನೀಡಿದ್ದರು. ಅವರು ಮಾಂಸಕ್ಕಾಗಿ ಅದನ್ನು ಕೊಂದು ಅದರ ದೇಹದ ಭಾಗಗಳನ್ನು ಸ್ಕೂಟರ್ನಲ್ಲಿ ಸಾಗಿಸುವಾಗ ರುಂಡ ರಸ್ತೆಗೆ ಬಿದ್ದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.</p>.<p>ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಯಾವುದೇ ಅಪರಾಧ ಹಿನ್ನೆಲೆ ಇಲ್ಲ. ತಿನ್ನುವ ಉದ್ದೇಶಕ್ಕೆ ಅವರು ಮಾಂಸ ಸಾಗಾಟ ಮಾಡಿದ್ದಾರೆ ಎಂದೂ ತಿಳಿಸಿದ್ದಾರೆ.</p>.<p>ಇಂತಹ ಪ್ರಕರಣಗಳು ನಡೆದಾಗ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಪ್ರಚೋದಿಸುವ ಪೋಸ್ಟ್ಗಳನ್ನು ಮಾಡಬಾರದು ಎಂದು ಜನರಲ್ಲಿ ಅವರು ಮನವಿ ಮಾಡಿದ್ದಾರೆ.</p>.<p>ದನದ ತಲೆ ಪತ್ತೆಯಾದ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ್ದ ಶಾಸಕ ಯಶ್ಪಾಲ್ ಸುವರ್ಣ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರತಿಭಟನಾ ಸಭೆ ನಡೆಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>