ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಖಾಸಗಿ ಬಸ್ ನೌಕರರು, ಹೆಂಚು ಕಾರ್ಮಿಕರು, ಬೀಡಿ ಕಾರ್ಮಿಕರಿದ್ದು ಅವರಿಗೆ ಯಾವುದೇ ಪರಿಹಾರ ಘೋಷಿಸಿಲ್ಲ. ಆದಾಯ ತೆರಿಗೆಯಿಂದ ಹೊರಗಿರುವ ರಾಜ್ಯದ ಪ್ರತಿ ಕುಟುಂಬಕ್ಕೆ ಮಾಸಿಕ ₹ 10000ವನ್ನು ಕನಿಷ್ಠ 6 ತಿಂಗಳು ನೀಡಬೇಕು. ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತ ಪಡಿತರ ನೀಡಬೇಕು. ಉದ್ಯೋಗ ಖಾತ್ರಿ ಕೂಲಿಯನ್ನು ₹ 600 ಕ್ಕೆ ಹೆಚ್ಚಿಸಿ, 200 ದಿನಗಳಿಗೆ ಏರಿಸಬೇಕು.