<p><strong>ಉಡುಪಿ:</strong> ಅಧಿಕಾರದ ಆಸೆಗೆ ಬಿಜೆಪಿ ಪ್ರಜಾತಂತ್ರ ವಿರೋಧಿ ಪ್ರಯತ್ನ ಮಾಡುತ್ತಿದ್ದು, ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಿಪಿಐ(ಎಂ) ಜಿಲ್ಲಾಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.</p>.<p>ರಾಜ್ಯಪಾಲರ ಕಚೇರಿ ಹಾಗೂ ಅಧಿಕಾರ ದುರುಪಯೋಗದ ವಿರುದ್ಧ ಶನಿವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ಬಿಜೆಪಿ ಮತ್ತೆ ಆಪರೇಷನ್ ಕಮಲ ಮಾಡುವ ಮೂಲಕ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರ ಚುಕ್ಕಾಣಿ ಹಿಡಿಯಲು ಯತ್ನಿಸುತ್ತಿದೆ. ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ಕೈಹಾಕಿದೆ ಎಂದು ಆರೋಪಿಸಿದರು.</p>.<p>ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಲಮಿತಿಯಲ್ಲಿ ವಿಶ್ವಾಮತ ಯಾಚನೆ ಮುಕ್ತಾಯಗೊಳಿಸಬೇಕು ಎಂದು ರಾಜ್ಯಪಾಲರು ತಾಕೀತು ಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವ ವಿರೋಧಿ ಪಕ್ಷವಾದ ಬಿಜೆಪಿಗೆ ಮತದಾರರು ಪಾಠ ಕಲಿಸಬೇಕು ಎಂದರು.</p>.<p>ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಹುಮತ ಸಾಬೀತು ಪಡಿಸಲು ಒಂದು ವಾರ ಸಮಯ ಕೋರಿದಾಗ, ರಾಜ್ಯಪಾಲರು 15 ದಿನ ಕಾಲಾವಕಾಶ ನೀಡಿದ್ದರು. ಈಗ ಕೆಲವೇ ಗಂಟೆಗಳ ಸಮಯ ನಿಗಧಿ ಮಾಡಲಾಗುತ್ತಿದೆ ಎಂದರು.</p>.<p>ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ರಾಜ್ಯದಲ್ಲಿ ಪ್ರಜಾಪ್ರಭುತ್ವ ವಿರೋಧಿ ಕೆಲಸಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿಮುಖಂಡರಾದ ಕೆ.ಶಂಕರ್, ವಿಶ್ವನಾಥ್ ರೈ, ಶಶಿಧರ ಗೊಲ್ಲ, ಉಮೇಶ್ ಕರ್ಕಡ, ನರಸಿಂಹ, ಕವಿರಾಜ್, ರಾಮ ಕರ್ಕಡ, ನಳಿನಿ, ಲಕ್ಷ್ಮಣ್ ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಅಧಿಕಾರದ ಆಸೆಗೆ ಬಿಜೆಪಿ ಪ್ರಜಾತಂತ್ರ ವಿರೋಧಿ ಪ್ರಯತ್ನ ಮಾಡುತ್ತಿದ್ದು, ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಿಪಿಐ(ಎಂ) ಜಿಲ್ಲಾಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.</p>.<p>ರಾಜ್ಯಪಾಲರ ಕಚೇರಿ ಹಾಗೂ ಅಧಿಕಾರ ದುರುಪಯೋಗದ ವಿರುದ್ಧ ಶನಿವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ಬಿಜೆಪಿ ಮತ್ತೆ ಆಪರೇಷನ್ ಕಮಲ ಮಾಡುವ ಮೂಲಕ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರ ಚುಕ್ಕಾಣಿ ಹಿಡಿಯಲು ಯತ್ನಿಸುತ್ತಿದೆ. ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರವನ್ನು ಬೀಳಿಸುವ ಕೆಲಸಕ್ಕೆ ಕೈಹಾಕಿದೆ ಎಂದು ಆರೋಪಿಸಿದರು.</p>.<p>ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಲಮಿತಿಯಲ್ಲಿ ವಿಶ್ವಾಮತ ಯಾಚನೆ ಮುಕ್ತಾಯಗೊಳಿಸಬೇಕು ಎಂದು ರಾಜ್ಯಪಾಲರು ತಾಕೀತು ಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವ ವಿರೋಧಿ ಪಕ್ಷವಾದ ಬಿಜೆಪಿಗೆ ಮತದಾರರು ಪಾಠ ಕಲಿಸಬೇಕು ಎಂದರು.</p>.<p>ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಹುಮತ ಸಾಬೀತು ಪಡಿಸಲು ಒಂದು ವಾರ ಸಮಯ ಕೋರಿದಾಗ, ರಾಜ್ಯಪಾಲರು 15 ದಿನ ಕಾಲಾವಕಾಶ ನೀಡಿದ್ದರು. ಈಗ ಕೆಲವೇ ಗಂಟೆಗಳ ಸಮಯ ನಿಗಧಿ ಮಾಡಲಾಗುತ್ತಿದೆ ಎಂದರು.</p>.<p>ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಕೂಡಲೇ ರಾಜ್ಯದಲ್ಲಿ ಪ್ರಜಾಪ್ರಭುತ್ವ ವಿರೋಧಿ ಕೆಲಸಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.</p>.<p>ಪ್ರತಿಭಟನೆಯಲ್ಲಿಮುಖಂಡರಾದ ಕೆ.ಶಂಕರ್, ವಿಶ್ವನಾಥ್ ರೈ, ಶಶಿಧರ ಗೊಲ್ಲ, ಉಮೇಶ್ ಕರ್ಕಡ, ನರಸಿಂಹ, ಕವಿರಾಜ್, ರಾಮ ಕರ್ಕಡ, ನಳಿನಿ, ಲಕ್ಷ್ಮಣ್ ಪ್ರತಿಭಟನೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>