<p><strong>ಉಡುಪಿ</strong>: ಸಿಪಿಎಂ ಚುನಾವಣೆಯಲ್ಲಿ ಸೋಲಬಹುದು ಆದರೆ ನಿರಂತರ ಜನರ ನಡುವೆ ಅಧಿಕಾರದಲ್ಲಿರುತ್ತದೆ. ಕಮ್ಯುನಿಸ್ಟ್ ಬಗ್ಗೆ ಕೆಲವು ಮಂದಿ ಪೂರ್ವಗ್ರಹಪೀಡಿತರಾಗಿದ್ದಾರೆ ಎಂದು ಪಕ್ಷದ ಸದಸ್ಯ ಅದಮಾರು ಶ್ರೀಪತಿ ಆಚಾರ್ಯ ಹೇಳಿದರು.</p><p>ಕೆಎಸ್ಆರ್ಟಿಸಿ ಹಳೆ ಬಸ್ ನಿಲ್ದಾಣ ಬಳಿಯ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಮಹಾಮಾಯ ಕಾಂಪ್ಲೆಕ್ಸ್ನ ಎರಡನೇ ಮಹಡಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನೊಂದವರ, ಶೋಷಿತರ ಪರವಾಗಿ ನಿಲ್ಲುವುದೇ ಪಕ್ಷ ಸಿದ್ಧಾಂತವಾಗಿರುವುದರಿಂದ ಪಕ್ಷವನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಸರ್ಕಾರದ ನೀತಿಗಳಿಂದ ಜಿಲ್ಲೆಯ ಅಪಾರ ಸಂಖ್ಯೆಯ ಜನರು ಇಂದು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಗೆ ಸಿಪಿಎಂ ಪಕ್ಷವೇ ಪರ್ಯಾಯ ಆಗಬೇಕಾಗಿದೆ ಎಂದರು.</p>.<p>ಜನರನ್ನು ಬೆಲೆ ಏರಿಕೆಯಿಂದ ರಕ್ಷಿಸಬೇಕಾದ ಹೊಣೆ ಪಕ್ಷದ ಮೇಲಿದೆ. ಕಾರ್ಮಿಕ ವರ್ಗದ ಪಕ್ಷವಾಗಿ ಕಾರ್ಮಿಕರ ಕಾನೂನು ರಕ್ಷಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು ಎಂದು ಅವರು ಹೇಳಿದರು.</p>.<p>ಸದಸ್ಯ ಕೆ. ಶಂಕರ್ ಅವರು ಪಕ್ಷದ ನಾಮಫಲಕ ಅನಾವರಣಗೊಳಿಸಿದರು. ಸಿಪಿಐನ ಕಾರ್ಯದರ್ಶಿ ಶೇಖರ್ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ವಲಯ ಸಮಿತಿ ಕಾರ್ಯದರ್ಶಿ ಶಶಿಧರ್ ಗೊಲ್ಲ ವಹಿಸಿದ್ದರು.</p>.<p>ಕಟ್ಟಡ ಮಾಲೀಕ ಲಕ್ಷ್ಮೀನಾರಾಯಣ ಭಟ್, ಜಿಲ್ಲಾ ಸಮಿತಿ ಸದಸ್ಯ ಕವಿರಾಜ್ ಎಸ್. ಕಾಂಚನ್, ಉಮೇಶ್ ಕುಂದರ್, ಶೀಲಾವತಿ ಪಡುಕೋಣೆ, ವಾಮನ ಪೂಜಾರಿ, ಶಿವಾನಂದ, ಕೋಣಿ ವೆಂಕಟೇಶ್, ಬಲ್ಕೀಸ್, ಸರೋಜ, ಸಂಜೀವ ಬಳ್ಕೂರು ಉಪಸ್ಥಿತರಿದ್ದರು.</p>
<p><strong>ಉಡುಪಿ</strong>: ಸಿಪಿಎಂ ಚುನಾವಣೆಯಲ್ಲಿ ಸೋಲಬಹುದು ಆದರೆ ನಿರಂತರ ಜನರ ನಡುವೆ ಅಧಿಕಾರದಲ್ಲಿರುತ್ತದೆ. ಕಮ್ಯುನಿಸ್ಟ್ ಬಗ್ಗೆ ಕೆಲವು ಮಂದಿ ಪೂರ್ವಗ್ರಹಪೀಡಿತರಾಗಿದ್ದಾರೆ ಎಂದು ಪಕ್ಷದ ಸದಸ್ಯ ಅದಮಾರು ಶ್ರೀಪತಿ ಆಚಾರ್ಯ ಹೇಳಿದರು.</p><p>ಕೆಎಸ್ಆರ್ಟಿಸಿ ಹಳೆ ಬಸ್ ನಿಲ್ದಾಣ ಬಳಿಯ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಮಹಾಮಾಯ ಕಾಂಪ್ಲೆಕ್ಸ್ನ ಎರಡನೇ ಮಹಡಿಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನೊಂದವರ, ಶೋಷಿತರ ಪರವಾಗಿ ನಿಲ್ಲುವುದೇ ಪಕ್ಷ ಸಿದ್ಧಾಂತವಾಗಿರುವುದರಿಂದ ಪಕ್ಷವನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಸರ್ಕಾರದ ನೀತಿಗಳಿಂದ ಜಿಲ್ಲೆಯ ಅಪಾರ ಸಂಖ್ಯೆಯ ಜನರು ಇಂದು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಗೆ ಸಿಪಿಎಂ ಪಕ್ಷವೇ ಪರ್ಯಾಯ ಆಗಬೇಕಾಗಿದೆ ಎಂದರು.</p>.<p>ಜನರನ್ನು ಬೆಲೆ ಏರಿಕೆಯಿಂದ ರಕ್ಷಿಸಬೇಕಾದ ಹೊಣೆ ಪಕ್ಷದ ಮೇಲಿದೆ. ಕಾರ್ಮಿಕ ವರ್ಗದ ಪಕ್ಷವಾಗಿ ಕಾರ್ಮಿಕರ ಕಾನೂನು ರಕ್ಷಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು ಎಂದು ಅವರು ಹೇಳಿದರು.</p>.<p>ಸದಸ್ಯ ಕೆ. ಶಂಕರ್ ಅವರು ಪಕ್ಷದ ನಾಮಫಲಕ ಅನಾವರಣಗೊಳಿಸಿದರು. ಸಿಪಿಐನ ಕಾರ್ಯದರ್ಶಿ ಶೇಖರ್ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ವಲಯ ಸಮಿತಿ ಕಾರ್ಯದರ್ಶಿ ಶಶಿಧರ್ ಗೊಲ್ಲ ವಹಿಸಿದ್ದರು.</p>.<p>ಕಟ್ಟಡ ಮಾಲೀಕ ಲಕ್ಷ್ಮೀನಾರಾಯಣ ಭಟ್, ಜಿಲ್ಲಾ ಸಮಿತಿ ಸದಸ್ಯ ಕವಿರಾಜ್ ಎಸ್. ಕಾಂಚನ್, ಉಮೇಶ್ ಕುಂದರ್, ಶೀಲಾವತಿ ಪಡುಕೋಣೆ, ವಾಮನ ಪೂಜಾರಿ, ಶಿವಾನಂದ, ಕೋಣಿ ವೆಂಕಟೇಶ್, ಬಲ್ಕೀಸ್, ಸರೋಜ, ಸಂಜೀವ ಬಳ್ಕೂರು ಉಪಸ್ಥಿತರಿದ್ದರು.</p>