ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನಂಜೆ ರಾಜನ ತಾಯಿಯ ಅಂತ್ಯಕ್ರಿಯೆ

Last Updated 27 ಆಗಸ್ಟ್ 2018, 18:27 IST
ಅಕ್ಷರ ಗಾತ್ರ

ಉಡುಪಿ: ಕುಖ್ಯಾತ ರೌಡಿ ಬನ್ನಂಜೆ ರಾಜ ಅವರ ತಾಯಿ ವಿಲಾಸಿನಿ ಶೆಟ್ಟಿಗಾರ್‌ ಅವರ ಅಂತ್ಯಕ್ರಿಯೆ ಮಲ್ಪೆಯ ಬಾಪುತೋಟದಲ್ಲಿ ಸೋಮವಾರ ನೆರವೇರಿತು.

ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನ್ಯಾಯಾಲಯದ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಬನ್ನಂಜೆ ರಾಜನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಗಿ ಭದ್ರತೆ ಮೂಲಕ ಉಡುಪಿಗೆ ಕರೆತಲಾಯಿತು. ಬೆಳಿಗ್ಗೆ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಮತ್ತೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. 28ರಂದು ಹಿಂಡಲಗ ಜೈಲಿಗೆ ರಾಜನನ್ನು ಕರೆದೊಯ್ಯಲಾಗುತ್ತದೆ.‌

ಬನ್ನಂಜೆ ರಾಜನ ತಾಯಿ ವಿಲಾಸಿನಿ ಶೆಟ್ಟಿಗಾರ್ ಅವರು ಮನೆಯಲ್ಲಿ ಆಕಸ್ಮಿಕವಾಗಿ ಜಾರಿ ಬಿದ್ದು, ತಲೆಗೆ ಗಂಭೀರ ಸ್ವರೂಪದ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಅವರನ್ನು ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು.

ಈಚೆಗಷ್ಟೇ ಬನ್ನಂಜೆ ರಾಜ ಅನಾರೋಗ್ಯಪೀಡಿತರಾಗಿದ್ದ ತಾಯಿಯನ್ನು ನೋಡಲು ಉಡುಪಿಗೆ ಬಂದಿದ್ದರು. ತಾಯಿ ಹಾಗೂ ಬಂಧುಗಳ ಜತೆ ಕೆಲಹೊತ್ತು ಕಾಲ ಕಳೆದಿದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT