<p><strong>ಉಡುಪಿ:</strong> ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ವಾರಸುದಾರರು ಪತ್ತೆಯಾಗದ ಐದು ಅಪರಿಚಿತ ಶವಗಳ ಅಂತ್ಯಸಂಸ್ಕಾರ ಸೋಮವಾರ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ನೆರವೇರಿತು.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಈಚೆಗೆ ಒಳರೋಗಿಗಳಾಗಿ ಬೈಂದೂರಿನ ರಾಜೀವ (50), ಉಡುಪಿಯ ರಮೇಶ (40), ಬ್ರಹ್ಮಾವರದ ಪ್ರವೀಣ (68)ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಈಚೆಗೆ ಮೂವರು ಮೃತಪಟ್ಟಿದ್ದರು.</p>.<p>ಸಾರ್ವಜನಿಕ ಸ್ಥಳದಲ್ಲಿ 75 ವರ್ಷದ ವೃದ್ಧರ ಶವ ಹಾಗೂ ಮಲ್ಪೆಯ ತೊಟ್ಟಂ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಐದು ಶವಗಳ ವಾರಸುದಾರರು ಪತ್ತೆಯಾಗದ ಕಾರಣ ಶವ ಸಂಸ್ಕಾರ ನೆರವೇರಿಸಲಾಯಿತು ಸಮಾಜ ಸೇವಕ ನಿತ್ಯಾನಂದ ಒಳಕಾಡು ತಿಳಿಸಿದರು.</p>.<p>ಉಡುಪಿ ಜಿಲ್ಲಾ ನಾಗರಿಕ ಸಮಿತಿ ಶವಗಳನ್ನು ಸಾಗಿಲು ಉಚಿತ ಆಂಬುಲನ್ಸ್ ವ್ಯವಸ್ಥೆ ಮಾಡಿತ್ತು. ಶವಗಳ ಮೇಲೆ ಹೊದಿಸಲು ವ್ಯಾಪಾರಿ ವಿಷ್ಣು ಉಚಿತ ಹೂವಿನ ಹಾರಗಳನ್ನು ನೀಡಿದರು.</p>.<p>ಕಾನೂನು ಪ್ರಕ್ರಿಯೆಗಳು ನೆರವೇರಿದ ಬಳಿಕ ಉಡುಪಿ ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಮಲ್ಪೆ ಠಾಣೆಯ ಜಯಕರ್ ಪಾಲನ್, ಎಸ್.ಎಂ.ಕಲಾದಗಿ ಸಮಕ್ಷಮದಲ್ಲಿ ಸಮಾಜಸೇವಕ ತಾರಾನಾಥ್ ಮೇಸ್ತ ಶಿರೂರು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು ಎಂದು ಒಳಕಾಡು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ವಾರಸುದಾರರು ಪತ್ತೆಯಾಗದ ಐದು ಅಪರಿಚಿತ ಶವಗಳ ಅಂತ್ಯಸಂಸ್ಕಾರ ಸೋಮವಾರ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ನೆರವೇರಿತು.</p>.<p>ಜಿಲ್ಲಾ ಆಸ್ಪತ್ರೆಯಲ್ಲಿ ಈಚೆಗೆ ಒಳರೋಗಿಗಳಾಗಿ ಬೈಂದೂರಿನ ರಾಜೀವ (50), ಉಡುಪಿಯ ರಮೇಶ (40), ಬ್ರಹ್ಮಾವರದ ಪ್ರವೀಣ (68)ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಈಚೆಗೆ ಮೂವರು ಮೃತಪಟ್ಟಿದ್ದರು.</p>.<p>ಸಾರ್ವಜನಿಕ ಸ್ಥಳದಲ್ಲಿ 75 ವರ್ಷದ ವೃದ್ಧರ ಶವ ಹಾಗೂ ಮಲ್ಪೆಯ ತೊಟ್ಟಂ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಐದು ಶವಗಳ ವಾರಸುದಾರರು ಪತ್ತೆಯಾಗದ ಕಾರಣ ಶವ ಸಂಸ್ಕಾರ ನೆರವೇರಿಸಲಾಯಿತು ಸಮಾಜ ಸೇವಕ ನಿತ್ಯಾನಂದ ಒಳಕಾಡು ತಿಳಿಸಿದರು.</p>.<p>ಉಡುಪಿ ಜಿಲ್ಲಾ ನಾಗರಿಕ ಸಮಿತಿ ಶವಗಳನ್ನು ಸಾಗಿಲು ಉಚಿತ ಆಂಬುಲನ್ಸ್ ವ್ಯವಸ್ಥೆ ಮಾಡಿತ್ತು. ಶವಗಳ ಮೇಲೆ ಹೊದಿಸಲು ವ್ಯಾಪಾರಿ ವಿಷ್ಣು ಉಚಿತ ಹೂವಿನ ಹಾರಗಳನ್ನು ನೀಡಿದರು.</p>.<p>ಕಾನೂನು ಪ್ರಕ್ರಿಯೆಗಳು ನೆರವೇರಿದ ಬಳಿಕ ಉಡುಪಿ ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಮಲ್ಪೆ ಠಾಣೆಯ ಜಯಕರ್ ಪಾಲನ್, ಎಸ್.ಎಂ.ಕಲಾದಗಿ ಸಮಕ್ಷಮದಲ್ಲಿ ಸಮಾಜಸೇವಕ ತಾರಾನಾಥ್ ಮೇಸ್ತ ಶಿರೂರು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು ಎಂದು ಒಳಕಾಡು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>