ಉಡುಪಿ: ವಾರಸುದಾರರು ಪತ್ತೆಯಾಗದ ನಾಲ್ಕು ಶವಗಳ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ನೆರವೇರಿಸಲಾಯಿತು.
ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಶವಸಂಸ್ಕಾರ ಮಾಡಿದರು.
ಮೃತರು ಹಿಂದೆ ಸಾರ್ವಜನಿಕರ ಸ್ಥಳಗಳಲ್ಲಿ ಅಸ್ವಸ್ಥರಾಗಿ ಬಿದ್ದಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರಿಂದ ಶವಗಳನ್ನು ವಾರಸುದಾರರಿಗೆ ಒಪ್ಪಿಸಲು ಶವಾಗಾರದಲ್ಲಿ ಇಡಲಾಗಿತ್ತು. ಯಾರೂ ಶವ ಸ್ವೀಕರಿಸಲು ಬಾರದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು ಎಂದು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ತಿಳಿಸಿದರು.
ಅಂತ್ಯಸಂಸ್ಕಾರ ವೇಳೇ ನಗರ ವಲಯ ಭಜನಾ ಮಂಡಳಿಗಳ ಅಧ್ಯಕ್ಷ ಕಿಶೋರ ಕನ್ನಾರ್ಪಾಡಿ, ರಮಾನಂದ ದೇವಾಡಿಗ, ಮಧ್ವರಾಜ್, ಸುಶೀಲ ರಾವ್, ಸಾಜಿ ಅಜ್ಜರಕಾಡು ಇದ್ದರು.
ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ:
ಬಿಹಾರ ಮೂಲದ ಅಸ್ಲಂ ಎಂಬಾತನ ಶವವನ್ನು ಪಡೆಯಲು ವಾರಸುದಾರರು ಬಾರದಿದ್ದರಿಂದ ಸಾಮಾಜಿಕ ಕಾರ್ಯರ್ತಅನ್ಸಾರ್ ಅಹಮದ್ ಮುಸ್ಲಿಂ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು. ಮುಖಂಡರಾದನಾಸಿರ್ ಯಾಕೂಬ್, ಅತಿಫ್ ಉದ್ಯಾವರ, ಆದಿಲ್, ಶಾಹುಲ್, ಶಾಹಿಲ್ ಇದ್ದರು.