ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನು ವ್ಯಾಪಾರಿ ಮೇಲೆ ದಾಳಿ, ಚೂರಿ ಇರಿತ

Last Updated 7 ಜೂನ್ 2019, 6:18 IST
ಅಕ್ಷರ ಗಾತ್ರ

ಉಡುಪಿ: ಇಲ್ಲಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಶುಕ್ರವಾರ ಬೆಳಿಗ್ಗೆ ದುಷ್ಕರ್ಮಿಗಳ ತಂಡವೊಂದು ಮೀನು ವ್ಯಾಪಾರಿಯ ಮೇಲೆ ದಾಳಿ ನಡೆಸಿ ಚೂರಿಯಿಂದ ಇರಿದು ಪರಾರಿಯಾಗಿದೆ.

ಮಂಗಳೂರಿನ ಪರಂಗಿಪೇಟೆಯ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಯಾಜ್ ಬೆಳಿಗ್ಗೆ ಪರಿಚಿತರೊಂದಿಗೆ ಮಂಗಳೂರಿನಿಂದ ಮಲ್ಪೆ ಬಂದರಿಗೆ ವ್ಯವಹಾರದ ಉದ್ದೇಶದಿಂದ ಬಂದಿದ್ದರು. ಕಾರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ಚೂರಿಯಿಂದ ದೇಹದ ಹಲವೆಡೆ ಇರಿದಿದ್ದಾರೆ.

ಮಲ್ಪೆ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT