ಉಡುಪಿ: ಇಲ್ಲಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಶುಕ್ರವಾರ ಬೆಳಿಗ್ಗೆ ದುಷ್ಕರ್ಮಿಗಳ ತಂಡವೊಂದು ಮೀನು ವ್ಯಾಪಾರಿಯ ಮೇಲೆ ದಾಳಿ ನಡೆಸಿ ಚೂರಿಯಿಂದ ಇರಿದು ಪರಾರಿಯಾಗಿದೆ.
ಮಂಗಳೂರಿನ ಪರಂಗಿಪೇಟೆಯ ರಿಯಾಜ್ ಗಂಭೀರವಾಗಿ ಗಾಯಗೊಂಡಿದ್ದು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಿಯಾಜ್ ಬೆಳಿಗ್ಗೆ ಪರಿಚಿತರೊಂದಿಗೆ ಮಂಗಳೂರಿನಿಂದ ಮಲ್ಪೆ ಬಂದರಿಗೆ ವ್ಯವಹಾರದ ಉದ್ದೇಶದಿಂದ ಬಂದಿದ್ದರು. ಕಾರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ಚೂರಿಯಿಂದ ದೇಹದ ಹಲವೆಡೆ ಇರಿದಿದ್ದಾರೆ.