ಬಾಲಕರ ಪೋಷಕರು ಮದ್ಯಪಾನ ಮಾಡಿ ಮಕ್ಕಳಿಗೆ ನಿತ್ಯ ಥಳಿಸುತ್ತಿದ್ದರಿಂದ ಬೇಸತ್ತಿದ್ದ ಮಕ್ಕಳು ನಿಟ್ಟೂರು ಬಾಲಕಿಯರ ಬಾಲಮಂದಿರದಲ್ಲಿದ್ದ ಅಕ್ಕನ ಹಾಸ್ಟೆನಲ್ಲಿ ಉಳಿಯುವುದಾಗಿ ತಿಳಿಸಿ ರಕ್ಷಣೆ ಹಾಗೂ ಪುನರ್ವಸತಿಗೆ ಕೋರಿದ್ದರು. ಈ ವಿಷಯವನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಿಗೆ ತಿಳಿಸಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಕ್ಕಳನ್ನು ಪುನರ್ವಸತಿಗಾಗಿ ಹಟ್ಟಿಯಂಗಡಿಯ ‘ನಮ್ಮ ಭೂಮಿ’ ಸಂಸ್ಥೆಗೆ ದಾಖಲಿಸಿದ್ದರು.