<p><strong>ಉಡುಪಿ:</strong> ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಈಚೆಗೆ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ</p>.<p>ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್ ನಗರದ ಶಾರುಖ್ ಬಂಧಿತರು. ಎಲ್ಲರೂ ಮಹಾರಾಷ್ಟ್ರದವರಾಗಿದ್ದು, ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಹಲವೆಡೆ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ವಂಚನೆ ಹೇಗೆ:</strong>ಒಂಟಿ ವೃದ್ಧ ಮಹಿಳೆಯರು ಅಥವಾ ಪುರುಷರು ರಸ್ತೆಯಲ್ಲಿ ಹೋಗುವಾಗ ಅವರ ಬಳಿ ಹೋಗಿ ಪೊಲೀಸರು ಎಂದು ಪರಿಚಯಿಸಿಕೊಳ್ಳುತ್ತಿದ್ದ ವಂಚಕರು, ಮುಂದೆ ಗಲಾಟೆ ನಡೆದಿದ್ದು, ಚಿನ್ನಾಭರಣ ಧರಿಸಿ ಓಡಾಡುವುದು ಸುರಕ್ಷಿತವಲ್ಲ. ಆಭರಣವನ್ನು ಬ್ಯಾಗ್ನಲ್ಲಿ ಇಟ್ಟುಕೊಳ್ಳಿ ಎಂದು ನಂಬಿಸಿ ಅವರಿಂದ ಚಿನ್ನಾಭರಣ ಎಗರಿಸಿ ಪರಾರಿಯಾಗುತ್ತಿದ್ದರು.</p>.<p>ತನಿಖೆಯ ವೇಳೆ ಆರೋಪಿಗಳ ವಿರುದ್ಧ ಉಡುಪಿ ನಗರ ಠಾಣೆ, ಕುಂದಾಪುರ ಠಾಣೆಯಲ್ಲಿ ತಲಾ 1, ವಿಜಯಪುರದಲ್ಲಿ 4, ಚಿಕ್ಕಮಗಳೂರಿನಲ್ಲಿ 1, ಬಂಟ್ವಾಳದಲ್ಲಿ 1, ಮಂಗಳೂರು ಉರ್ವ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ. ಆರೋಪಿಗಳು ಹಲವು ಕಡೆಗಳಲ್ಲಿ ಕಳವು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮಂಗಳೂರಿನಲ್ಲಿ 12 ಗ್ರಾಂ ಚಿನ್ನದ ಚೈನ್ ಕದ್ದಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಬೈಕ್, ₹ 5,100 ವಶಕ್ಕೆ ಪಡೆಯಲಾಗಿದೆ. ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿದ್ದ ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಶ್ರೀರಾಂಪುರದ ಚಿನ್ನದ ಅಂಗಡಿಯಿಂದ 65 ಗ್ರಾಂ ಚಿನ್ನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಒಟ್ಟು ₹ 7 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಳಾಗಿದೆ ಎಂದು ಪೊಲೀಸರು ತಿಳಿಸಿದರು</p>.<p>ಕಾರ್ಯಾಚರಣೆಯಲ್ಲಿ ಉಡುಪಿ ನಗರ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ, ಡಿಸಿಐಬಿ ಇನ್ಸ್ಪೆಕ್ಟರ್ ಡಿ.ಆರ್.ಮಂಜಪ್ಪ, ಉಡುಪಿ ನಗರ ಠಾಣೆ ಪಿಎಸ್ಐ ಶಕ್ತಿವೇಲು, ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ, ಎಎಸ್ಐ ಸುಧಾಕರ, ಲೋಕೇಶ್, ರಿಯಾಝ್, ಅಹ್ಮದ್, ಮಂಜುನಾಥ, ಸಂತೋಷ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಈಚೆಗೆ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ</p>.<p>ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್ ನಗರದ ಶಾರುಖ್ ಬಂಧಿತರು. ಎಲ್ಲರೂ ಮಹಾರಾಷ್ಟ್ರದವರಾಗಿದ್ದು, ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಹಲವೆಡೆ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ವಂಚನೆ ಹೇಗೆ:</strong>ಒಂಟಿ ವೃದ್ಧ ಮಹಿಳೆಯರು ಅಥವಾ ಪುರುಷರು ರಸ್ತೆಯಲ್ಲಿ ಹೋಗುವಾಗ ಅವರ ಬಳಿ ಹೋಗಿ ಪೊಲೀಸರು ಎಂದು ಪರಿಚಯಿಸಿಕೊಳ್ಳುತ್ತಿದ್ದ ವಂಚಕರು, ಮುಂದೆ ಗಲಾಟೆ ನಡೆದಿದ್ದು, ಚಿನ್ನಾಭರಣ ಧರಿಸಿ ಓಡಾಡುವುದು ಸುರಕ್ಷಿತವಲ್ಲ. ಆಭರಣವನ್ನು ಬ್ಯಾಗ್ನಲ್ಲಿ ಇಟ್ಟುಕೊಳ್ಳಿ ಎಂದು ನಂಬಿಸಿ ಅವರಿಂದ ಚಿನ್ನಾಭರಣ ಎಗರಿಸಿ ಪರಾರಿಯಾಗುತ್ತಿದ್ದರು.</p>.<p>ತನಿಖೆಯ ವೇಳೆ ಆರೋಪಿಗಳ ವಿರುದ್ಧ ಉಡುಪಿ ನಗರ ಠಾಣೆ, ಕುಂದಾಪುರ ಠಾಣೆಯಲ್ಲಿ ತಲಾ 1, ವಿಜಯಪುರದಲ್ಲಿ 4, ಚಿಕ್ಕಮಗಳೂರಿನಲ್ಲಿ 1, ಬಂಟ್ವಾಳದಲ್ಲಿ 1, ಮಂಗಳೂರು ಉರ್ವ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ. ಆರೋಪಿಗಳು ಹಲವು ಕಡೆಗಳಲ್ಲಿ ಕಳವು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮಂಗಳೂರಿನಲ್ಲಿ 12 ಗ್ರಾಂ ಚಿನ್ನದ ಚೈನ್ ಕದ್ದಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಬೈಕ್, ₹ 5,100 ವಶಕ್ಕೆ ಪಡೆಯಲಾಗಿದೆ. ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿದ್ದ ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಶ್ರೀರಾಂಪುರದ ಚಿನ್ನದ ಅಂಗಡಿಯಿಂದ 65 ಗ್ರಾಂ ಚಿನ್ನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಒಟ್ಟು ₹ 7 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಳಾಗಿದೆ ಎಂದು ಪೊಲೀಸರು ತಿಳಿಸಿದರು</p>.<p>ಕಾರ್ಯಾಚರಣೆಯಲ್ಲಿ ಉಡುಪಿ ನಗರ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ, ಡಿಸಿಐಬಿ ಇನ್ಸ್ಪೆಕ್ಟರ್ ಡಿ.ಆರ್.ಮಂಜಪ್ಪ, ಉಡುಪಿ ನಗರ ಠಾಣೆ ಪಿಎಸ್ಐ ಶಕ್ತಿವೇಲು, ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ, ಎಎಸ್ಐ ಸುಧಾಕರ, ಲೋಕೇಶ್, ರಿಯಾಝ್, ಅಹ್ಮದ್, ಮಂಜುನಾಥ, ಸಂತೋಷ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>