<p>ಉಡುಪಿ: ಕುಂದಾಪುರ ತಾಲ್ಲೂಕು ಶಂಕರನಾರಾಯಣದ ಮೂಡ ಬೈಲೂರಿನ ತೋಟದ ಪಂಪ್ಸೆಟ್ ಶೆಡ್ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದ ಸಂದರ್ಭ ವಿದ್ಯುತ್ ಶಾಕ್ನಿಂದ ವ್ಯಕ್ತಿ ಮೃತಪಟ್ಟಿದ್ದಾರೆ.</p>.<p>ಉತ್ತರ ಪ್ರದೇಶ ಮೂಲದ ವಸಿಷ್ಠ ಪಾಸ್ವಾನ್ (34) ಮೃತ ವ್ಯಕ್ತಿ. ಸಂಬಂಧಿಕರಾದ ವಿಫಿನ್ ಹಾಗೂ ರಾಮಾನಿ ಅವರೊಂದಿಗೆ ಕೆಲಸಕ್ಕೆ ಬಂದಿದ್ದ ವಸಿಷ್ಠ ಪಾಸ್ವಾನ್ ಸೋಮವಾರ ರಾತ್ರಿ ಮೊಬೈಲ್ ಚಾರ್ಜ್ಗೆ ಹಾಕಿದಾಗ ಶಾಕ್ ಹೊಡೆದಿದೆ.</p>.<p>ಕೂಡಲೇ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶಂಕರ ನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆತ್ಮಹತ್ಯೆ</p>.<p>ಉಡುಪಿ: ತಾಲ್ಲೂಕಿನ 80ನೇ ಬಡಗಬೆಟ್ಟು ಗ್ರಾಮದ ದಶರಥ ನಗರದ ಎಂ.ಎಂ. ಟವರ್ಸ್ನಲ್ಲಿ ವಾಸವಿದ್ದ ಡಿನ್ ಲಿಯು ಚೊಂಗ್ (19) ಎಂಬಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಜೀವನದಲ್ಲಿ ಜಿಗುಪ್ಸೆ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮಣಿಪಾಲ ಠಾಣೆ ಯುಡಿಆರ್ ಪ್ರಕರಣ ದಾಖಲಾಗಿದೆ.</p>.<p>ಚಿರತೆ ರಕ್ಷಣೆ:</p>.<p>ಉಡುಪಿ: ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡಪಾಡಿ ಪದವು ಬಳಿಯ ಕಾಡಿನಲ್ಲಿ ತಂತಿ ಬೇಲಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ.</p>.<p>ಚಿರತೆ ಸಿಲುಕಿರುವ ಬಗ್ಗೆ ಮಾಹಿತಿ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಬಳಿಕ ಸುರಕ್ಷಿತವಾಗಿ ಸೆರೆ ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಕುಂದಾಪುರ ತಾಲ್ಲೂಕು ಶಂಕರನಾರಾಯಣದ ಮೂಡ ಬೈಲೂರಿನ ತೋಟದ ಪಂಪ್ಸೆಟ್ ಶೆಡ್ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದ ಸಂದರ್ಭ ವಿದ್ಯುತ್ ಶಾಕ್ನಿಂದ ವ್ಯಕ್ತಿ ಮೃತಪಟ್ಟಿದ್ದಾರೆ.</p>.<p>ಉತ್ತರ ಪ್ರದೇಶ ಮೂಲದ ವಸಿಷ್ಠ ಪಾಸ್ವಾನ್ (34) ಮೃತ ವ್ಯಕ್ತಿ. ಸಂಬಂಧಿಕರಾದ ವಿಫಿನ್ ಹಾಗೂ ರಾಮಾನಿ ಅವರೊಂದಿಗೆ ಕೆಲಸಕ್ಕೆ ಬಂದಿದ್ದ ವಸಿಷ್ಠ ಪಾಸ್ವಾನ್ ಸೋಮವಾರ ರಾತ್ರಿ ಮೊಬೈಲ್ ಚಾರ್ಜ್ಗೆ ಹಾಕಿದಾಗ ಶಾಕ್ ಹೊಡೆದಿದೆ.</p>.<p>ಕೂಡಲೇ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಶಂಕರ ನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆತ್ಮಹತ್ಯೆ</p>.<p>ಉಡುಪಿ: ತಾಲ್ಲೂಕಿನ 80ನೇ ಬಡಗಬೆಟ್ಟು ಗ್ರಾಮದ ದಶರಥ ನಗರದ ಎಂ.ಎಂ. ಟವರ್ಸ್ನಲ್ಲಿ ವಾಸವಿದ್ದ ಡಿನ್ ಲಿಯು ಚೊಂಗ್ (19) ಎಂಬಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p>.<p>ಜೀವನದಲ್ಲಿ ಜಿಗುಪ್ಸೆ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮಣಿಪಾಲ ಠಾಣೆ ಯುಡಿಆರ್ ಪ್ರಕರಣ ದಾಖಲಾಗಿದೆ.</p>.<p>ಚಿರತೆ ರಕ್ಷಣೆ:</p>.<p>ಉಡುಪಿ: ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡಪಾಡಿ ಪದವು ಬಳಿಯ ಕಾಡಿನಲ್ಲಿ ತಂತಿ ಬೇಲಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ.</p>.<p>ಚಿರತೆ ಸಿಲುಕಿರುವ ಬಗ್ಗೆ ಮಾಹಿತಿ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಬಳಿಕ ಸುರಕ್ಷಿತವಾಗಿ ಸೆರೆ ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>