ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಭರಣ ಖರೀದಿ ಸೋಗಿನಲ್ಲಿ ವಂಚನೆ

Last Updated 2 ಅಕ್ಟೋಬರ್ 2019, 6:17 IST
ಅಕ್ಷರ ಗಾತ್ರ

ಉಡುಪಿ: ಜುವೆಲ್ಲರಿ ಅಂಗಡಿಗಳಲ್ಲಿ ಚಿನ್ನಾಭರಣ ಖರೀದಿಸಿ, ಆನ್‌ಲೈನ್‌ನಲ್ಲಿ ಹಣ ಪಾವತಿ ಮಾಡಿರುವುದಾಗಿ ನಂಬಿಸಿ ವಂಚನೆ ಎಸಗುತ್ತಿರುವ ಜಾಲ ಉಡುಪಿಗೆ ಕಾಲಿಟ್ಟಿರುವ ಶಂಕೆ ಇದೆ. ಈ ಬಗ್ಗೆ ಜುವೆಲ್ಲರಿ ಮಾಲೀಕರು ಎಚ್ಚರವಾಗಿರಬೇಕು ಎಂದು ಪೊಲೀಸರು ಸಂದೇಶ ರವಾನಿಸಿದ್ದಾರೆ.

ಈಗಾಗಲೇ ವಂಚಕರ ತಂಡ ಕಾರವಾರ ಹಾಗೂ ಕೊಪ್ಪದಲ್ಲಿ ವಂಚನೆ ಎಸಗಿದೆ. ಉಡುಪಿಯಲ್ಲೂ ಅವರ ಚಲನವಲನದ ಬಗ್ಗೆ ಮಾಹಿತಿ ಸಿಕ್ಕಿದ್ದು, ಎಚ್ಚರವಾಗಿರಬೇಕು ಎಂದು ತಿಳಿಸಿರುವ ಪೊಲೀಸರು, ಆರೋಪಿಗಳ ಭಾವಚಿತ್ರ ಹಾಗೂ ಕಾರಿನ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ.‌

ವಂಚಕರ ತಂಡ ಆಭರಣದ ಅಂಗಡಿಗೆ ತೆರಳಿ ಚಿನ್ನ ಖರೀದಿಸುತ್ತದೆ. ಬಳಿಕ ಆನ್‌ಲೈನ್‌ ಪೇಮೆಂಟ್‌ ಮಾಡಿರುವ ಕುರಿತು ಮೊಬೈಲ್‌ನಲ್ಲಿ ದಾಖಲೆ ಸೃಷ್ಟಿಸಿ ಮಾಲೀಕರಿಗೆ ನಂಬಿಸಿ ಚಿನ್ನದೊಂದಿಗೆ ಪರಾರಿಯಾಗುತ್ತದೆ. ಅಸಲಿಗೆ ಮಾಲೀಕರ ಬ್ಯಾಂಕ್ ಖಾತೆಗೆ ಹಣವೇ ಬಂದಿರುವುದಿಲ್ಲ ಎಂದು ಪೊಲೀಸರು ವಂಚನೆಯ ಜಾಲದ ಬಗ್ಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT