ಉಡುಪಿ: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದಿ ಪೊಲೀಸರು ಕುಂದಾಪುರ ಹಾಗೂ ಬೈಂದೂರಿನಲ್ಲಿ 11 ಮಂದಿಯನ್ನು ಬಂಧಿಸಿ 1 ಕೆಜಿ 383 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.
ಬುಧವಾರ ದುಬೈನಿಂದ ಕ್ಯಾಲಿಕಟ್ಗೆ ಬಂದಿಳಿದಿದ್ದ ಭಟ್ಕಳ ಮೂಲದ ವ್ಯಕ್ತಿಗಳು, ರೈಲಿನಲ್ಲಿ ಮಂಗಳೂರಿಗೆ ಬಂದು ಅಲ್ಲಿಂದ ಕಾರಿನಲ್ಲಿ ಭಟ್ಕಳಕ್ಕೆ ಹೋಗುವಾಗ ಕುಂದಾಪುರದ ವಡೇರ ಹೋಬಳಿ ಪ್ರಭು ಪೆಟ್ರೋಲ್ ಬಂಕ್ ಬಳಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದಾರೆ.
2 ವಾಹನಗಳಲ್ಲಿದ್ದ 11 ಜನರನ್ನು ಬಂಧಿಸಿ 1 ಕೆ.ಜಿ 152 ಗ್ರಾಂ ಚಿನ್ನದ ಕಾಯಿನ್ ಹಾಗೂ 2 ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು, ಮಂಗಳೂರು ಕಸ್ಟಮ್ಸ್ ವಿಭಾಗಕ್ಕೆ ಒಪ್ಪಿಸಿದ್ದಾರೆ. ಚಿನ್ನದ ಮೌಲ್ಯದ ₹ 46 ಲಕ್ಷ ಎಂದು ಅಂದಾಜಿಸಲಾಗಿದೆ.
ಮತ್ತೊಂದೆಡೆ ಮಂಗಳೂರಿನಿಂದ ಭಟ್ಕಳಕ್ಕೆ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಂದೂರಿನಲ್ಲಿ ಬಂಧಿಸಲಾಗಿದ್ದು, 231 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.