<p><strong>ಉಡುಪಿ: </strong>ಈಚೆಗೆ ನಗರದಲ್ಲಿ ಇಬ್ಬರು ಬಾಲಕರ ಅಪರಹಣ ನಡೆದಿಲ್ಲ. ಬಾಲಕರು ಪುನರ್ವಸತಿ ಕೇಂದ್ರದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಿಳಿಸಿದೆ.</p>.<p>ಬಾಲಕರ ಪೋಷಕರು ಮದ್ಯಪಾನ ಮಾಡಿ ಮಕ್ಕಳಿಗೆ ನಿತ್ಯ ಥಳಿಸುತ್ತಿದ್ದರಿಂದ ಬೇಸತ್ತಿದ್ದ ಮಕ್ಕಳು ನಿಟ್ಟೂರು ಬಾಲಕಿಯರ ಬಾಲಮಂದಿರದಲ್ಲಿದ್ದ ಅಕ್ಕನ ಹಾಸ್ಟೆನಲ್ಲಿ ಉಳಿಯುವುದಾಗಿ ತಿಳಿಸಿ ರಕ್ಷಣೆ ಹಾಗೂ ಪುನರ್ವಸತಿಗೆ ಕೋರಿದ್ದರು. ಈ ವಿಷಯವನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಿಗೆ ತಿಳಿಸಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಕ್ಕಳನ್ನು ಪುನರ್ವಸತಿಗಾಗಿ ಹಟ್ಟಿಯಂಗಡಿಯ ‘ನಮ್ಮ ಭೂಮಿ’ ಸಂಸ್ಥೆಗೆ ದಾಖಲಿಸಿದ್ದರು.</p>.<p>ಬಾಲಕನ ಪೋಷಕರಾದ ನಾಗರಾಜ್ ಈ ಬಗ್ಗೆ ವಿಚಾರಿಸದೆ ನೇರವಾಗಿ ಮಹಿಳಾ ಠಾಣೆಗೆ ದೂರು ನೀಡಿದ್ದರಿಂದ ಗೊಂದಲ ಉಂಟಾಗಿದೆ. ಮಕ್ಕಳನ್ನು ಮುಂದೆ ಸರಿಯಾಗಿ ನೋಡಿಕೊಳ್ಳುವುದಾಗಿ ಪೋಷಕರು ಅಗತ್ಯ ದಾಖಲೆಗಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸಿ ಮಕ್ಕಳನ್ನು ವಶಕ್ಕೆ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಈಚೆಗೆ ನಗರದಲ್ಲಿ ಇಬ್ಬರು ಬಾಲಕರ ಅಪರಹಣ ನಡೆದಿಲ್ಲ. ಬಾಲಕರು ಪುನರ್ವಸತಿ ಕೇಂದ್ರದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಿಳಿಸಿದೆ.</p>.<p>ಬಾಲಕರ ಪೋಷಕರು ಮದ್ಯಪಾನ ಮಾಡಿ ಮಕ್ಕಳಿಗೆ ನಿತ್ಯ ಥಳಿಸುತ್ತಿದ್ದರಿಂದ ಬೇಸತ್ತಿದ್ದ ಮಕ್ಕಳು ನಿಟ್ಟೂರು ಬಾಲಕಿಯರ ಬಾಲಮಂದಿರದಲ್ಲಿದ್ದ ಅಕ್ಕನ ಹಾಸ್ಟೆನಲ್ಲಿ ಉಳಿಯುವುದಾಗಿ ತಿಳಿಸಿ ರಕ್ಷಣೆ ಹಾಗೂ ಪುನರ್ವಸತಿಗೆ ಕೋರಿದ್ದರು. ಈ ವಿಷಯವನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಿಗೆ ತಿಳಿಸಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಕ್ಕಳನ್ನು ಪುನರ್ವಸತಿಗಾಗಿ ಹಟ್ಟಿಯಂಗಡಿಯ ‘ನಮ್ಮ ಭೂಮಿ’ ಸಂಸ್ಥೆಗೆ ದಾಖಲಿಸಿದ್ದರು.</p>.<p>ಬಾಲಕನ ಪೋಷಕರಾದ ನಾಗರಾಜ್ ಈ ಬಗ್ಗೆ ವಿಚಾರಿಸದೆ ನೇರವಾಗಿ ಮಹಿಳಾ ಠಾಣೆಗೆ ದೂರು ನೀಡಿದ್ದರಿಂದ ಗೊಂದಲ ಉಂಟಾಗಿದೆ. ಮಕ್ಕಳನ್ನು ಮುಂದೆ ಸರಿಯಾಗಿ ನೋಡಿಕೊಳ್ಳುವುದಾಗಿ ಪೋಷಕರು ಅಗತ್ಯ ದಾಖಲೆಗಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಸಲ್ಲಿಸಿ ಮಕ್ಕಳನ್ನು ವಶಕ್ಕೆ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>